Featured

ಉಡುಪಿ : ಟೋಲ್‍ಗೇಟ್‍ ಅಂಬುಲೆನ್ಸ್ ಅಪಘಾತ ಪ್ರಕರಣ : ಟೋಲ್‍ನಲ್ಲಿ ಮಲಗಿದ್ದ ಹಸು ತಪ್ಪಿಸಲು ಹೋಗಿ ಡಿಕ್ಕಿ : ಅಂಬುಲೆನ್ಸ್ ಚಾಲಕ – Vishwanews24

ಉಡುಪಿ : ಟೋಲ್‍ಗೇಟ್‍ ಅಂಬುಲೆನ್ಸ್ ಅಪಘಾತ ಪ್ರಕರಣ : ಟೋಲ್‍ನಲ್ಲಿ ಮಲಗಿದ್ದ ದನ ತಪ್ಪಿಸಲು ಹೋಗಿ ಡಿಕ್ಕಿ : ಅಂಬುಲೆನ್ಸ್ ಚಾಲಕ

ಉಡುಪಿ: ಟೋಲ್‍ನಲ್ಲಿ ಹಸು ಮಲಗಿದ್ದೇ ಅಂಬುಲೆನ್ಸ್ ಅಪಘಾತಕ್ಕೆ ಕಾರಣ ಎಂದು ಚಾಲಕ ರೋಷನ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಅಂಬುಲೆನ್ಸ್ ಪಲ್ಟಿಯಾದ ಹಿನ್ನೆಲೆ ನಾಲ್ವರು ಸಾವನ್ನಪ್ಪಿದ್ದರು. ಸದ್ಯ ಘಟನೆ ವೇಳೆ ಗಾಯಗೊಂಡಿರುವ ಟೋಲ್ ಸಿಬ್ಬಂದಿ ಹಾಗೂ ಇತರ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಈ ನಡುವೆ ಆಂಬುಲೆನ್ಸ್ ಚಾಲಕ ರೋಷನ್ ಆಂಬುಲೆನ್ಸ್‍ಗೆ ಅಡ್ಡಲಾಗಿ ದನ ಬಂದಿದ್ದೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ನಾನು ಉಡುಪಿಯ ಆದರ್ಶ ಆಸ್ಪತ್ರೆಗೆ ರೋಗಿ ಒಬ್ಬರನ್ನು ಶಿಫ್ಟ್ ಮಾಡುತ್ತಿದ್ದೆ. ಶಿರೂರಿನಲ್ಲಿ ಫಸ್ಟ್ ಗೇಟ್ ಸೆಕೆಂಡ್ ಗೇಟ್ ಸಿಗುತ್ತದೆ. ಎಮರ್ಜೆನ್ಸಿ ಲೈನ್‍ನಲ್ಲಿ ಫಸ್ಟ್ ಗೇಟ್ ತೆಗೆದಿದ್ದಾರೆ. ಸೆಕೆಂಡ್ ಗೇಟ್ ತೆಗೆಯುವಾಗ ಅಡ್ಡಲಾಗಿ ದನ ಮಲಗಿತ್ತು. ಆಗ ನನಗೆ ಏನು ಮಾಡಲು ಸಾಧ್ಯವಾಗಲಿಲ್ಲ. ದನ ಮತ್ತು ಇಬ್ಬರು ಟೋಲ್ ಸಿಬ್ಬಂದಿ ಅಲ್ಲಿಯೇ ಇದ್ದರು. ಹೀಗಾಗಿ ಅಪಘಾತವಾಗಿ ವಾಹನ ಪಲ್ಟಿ ಆಗುತ್ತಿತ್ತು. ಈ ಭಯದಿಂದ ನಾನು ಹಿಂದುಗಡೆ ಬ್ರೇಕ್ ಹೊಡೆದ್ದರಿಂದ ಅಪಘಾತವಾಯಿತು ಎಂದಿದ್ದಾರೆ.

ಹೊನ್ನಾವರದಿಂದ ಕುಂದಾಪುರಕ್ಕೆ ಬರುತ್ತಿದ್ದ ಅಂಬುಲೆನ್ಸ್, ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಒವರ್ ಸ್ಪೀಡ್ ಅಂಬ್ಯುಲೆನ್ಸ್:-ಬೈಂದೂರು ಟೋಲ್ ಕಂಬಕ್ಕೆ ಡಿಕ್ಕಿ-ಮೂವರು ಗಂಭೀರ-ಒರ್ವ ಚಿಂತಾಜನಕ-ಭೀಕರ ದೃಶ್ಯಾ ಸಿಸಿ ಕೇಮಾರದಲ್ಲಿ‌ ಸೆರೆ vishwanews24👇
https://fb.watch/enFak961yv/

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago