ಉಡುಪಿ: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರನೋರ್ವ ಟ್ರಕ್ ನ ಚಕ್ರದಡಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಮೃತ ದುರ್ದೈವಿಯನ್ನು ದೆಂದೂರುಕಟ್ಟೆಯ ನಿವಾಸಿ ಪ್ರದೀಪ (38) ಎಂದು ಗುರುತಿಸಲಾಗಿದೆ.
ಟ್ರಕ್ ಬೈಕ್ ಸವಾರನನ್ನು ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಎಳೆದುಕೊಂಡು ಹೋಗಿದೆ. ಅಪಘಾತದ ರಭಸಕ್ಕೆ ಮೃತ ಸವಾರನ ತಲೆ ಭಾಗವು ಛಿದ್ರಗೊಂಡಿದೆ.
ಪ್ರದೀಪ್ ಅಂಬಲಪಾಡಿ ಸುರಭಿ ಅಟೋಮೊಬೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಉಡುಪಿ ಸಂಚಾರಿ ಪೋಲಿಸರು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ನೆರವಾದರು.
ರನ್ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್ನ ಸರ್ದಾರ್ ವಲ್ಲಭಭಾಯಿ ಪಟೇಲ್…
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …