Featured

ಉಡುಪಿ: ಟ್ವೀಟ್ ವಿವಾದ – ಡಾ. ಕೀರ್ತನ್ ಉಪಾಧ್ಯಾಯ ಸ್ಪಷ್ಟನೆ – vishwanews24

ಉಡುಪಿ: ಟ್ವೀಟ್ ವಿವಾದ – ನನ್ನ ಎಕ್ಸ್  ಖಾತೆಯನ್ನು ಹ್ಯಾಕ್ ಮಾಡಲಾಗಿದೆ : ಡಾ. ಕೀರ್ತನ್ ಉಪಾಧ್ಯಾಯ ಸ್ಪಷ್ಟನೆ

ಉಡುಪಿ: ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯ ಡಾ. ಕೀರ್ತನ್ ಉಪಾಧ್ಯಾಯ ಅವರ ಎಕ್ಸ್ ಖಾತೆಯಿಂದ ಮಾಡಿದ ಟ್ವೀಟ್ ವಿವಾದವನ್ನು ಸೃಷ್ಟಿಸಿದೆ. ಇದೀಗ ಅವರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಡಾ. ಕೀರ್ತನ್ ತಿಳಿಸಿದ್ದಾರೆ.

ಜುಲೈ 13 ರಂದು, ಡಾ.ಕೀರ್ತನ್ ಅವರನ್ನು ಎಕ್ಸ್ ನಲ್ಲಿ ಒಬ್ಬರು, “ನೀವು ಈ ಪ್ರಪಂಚದಿಂದ ಒಂದು ವಿಷಯವನ್ನು ತೆಗೆದುಹಾಕಲು ಬಯಸಿದರೆ, ಅದು ಏನು?” ಎಂದು ಪ್ರಶ್ನಿಸಿದ್ದಾರೆ. ಆ ಪ್ರಶ್ನೆಗೆ ಡಾ. ಕೀರ್ತನ್ ಉಪಾಧ್ಯಾಯ ಅವರು “ಮುಸ್ಲಿಂ ಸಮುದಾಯ” ಎಂದು ಉತ್ತರಿಸಿದ್ದಾರೆ. ಆ ಉತ್ತರವೇ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಇದೀಗ ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಡಾ ಕೀರ್ತನ್ ಉಪಾಧ್ಯಾಯ ವಿರುದ್ಧ ಬಳಕೆದಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಲವು ಬಳಕೆದಾರರು ರಾಜ್ಯ ಡಿಜಿಪಿಯನ್ನು ‘ಎಕ್ಸ್’ ನಲ್ಲಿ ಟ್ಯಾಗ್ ಮಾಡಿದ್ದು, ಇಂತಹ ವಿವಾದಾತ್ಮಕ ಟ್ವೀಟ್ ಮಾಡಿರುವ ವೈದ್ಯರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆದರೆ ಡಾ.ಕೀರ್ತನ್ ಅವರ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಕ್ ಮಾಡಿದಾತ ಈ ರೀತಿಯ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಈ ಎಲ್ಲಾ ಘಟನೆಯ ಬಳಿಕ ಡಾ ಕೀರ್ತನ್ ಅವರು ಕೂಡ ಟ್ವೀಟ್ ಮಾಡಿದ್ದು, “ಕೆಲವು ತಿಂಗಳ ಹಿಂದೆ ನಾನು ಟ್ವಿಟರ್ ಬಳಸುವುದನ್ನು ನಿಲ್ಲಿಸಿದ್ದೆ, ಯಾವುದೋ ಅನಗತ್ಯ ಪೋಸ್ಟ್ ಮಾಡಲಾಗಿದೆ ಎಂದು ನನಗೆ ತಿಳಿಯಿತು. ಯಾರೋ ನನ್ನ ಖಾತೆಯನ್ನು ಬಳಸುತ್ತಿದ್ದಾರೆ, ನಾನು ನನ್ನ ಪಾಸ್‌ವರ್ಡ್ ಲಾಗಿನ್ ವಿವರಗಳನ್ನು ಮತ್ತು ಖಾತೆಗೆ ಸಂಬಂಧಿಸಿದ ಎಲ್ಲವನ್ನೂ ಬದಲಾಯಿಸಿದ್ದೇನೆ. ನನ್ನ ಖಾತೆಯನ್ನು ಹ್ಯಾಕ್ ಮಾಡಲಾಗಿದೆ” ಎಂದು ಸ್ಪಷ್ಟ ಪಡಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago