Featured

ಉಡುಪಿ: ಡಾ.ಎ. ವಿ ಬಾಳಿಗ ಆಸ್ಪತ್ರೆಯಲ್ಲಿ 30ನೇ ಉಚಿತ ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ – Vishwanews24

ಉಡುಪಿ: ಡಾ.ಎ. ವಿ ಬಾಳಿಗ ಆಸ್ಪತ್ರೆಯಲ್ಲಿ 30ನೇ ಉಚಿತ ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ

ಉಡುಪಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಮಲಾ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ.ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಸಂಯುಕ್ತಾಶ್ರಯದಲ್ಲಿ “ನಶಾ ಮುಕ್ತ ಭಾರತ ಅಭಿಯಾನ”ದ ಪ್ರಾಯೋಜಕತ್ವದಲ್ಲಿ, 30ನೇ ಉಚಿತ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರ ವಸತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿಯಲ್ಲಿ ನಡೆಯಿತು.
ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಶಿಬಿರಾರ್ಥಿಗಳಿಗೆ ಮತ್ತು ಅವರ ಕುಟುಂಬದವರಿಗೆ ಈ ಶಿಬಿರದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದ ಅತಿಥಿಗಳಾಗಿ ಶರ್ಮಿಳಾ ಎಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲೆ. ಡಾ. ನಾಗಭೂಷಣ್ ಉಡುಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು.ವೀಣಾ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ. ಶ್ರೀಮತಿ ರತ್ನಾ, ಉಪ ನಿರ್ದೇಶಕರು, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಇವರೆಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ. ಎ. ವಿ ಬಾಳಿಗಾ ಸಮೂಹ ಸಂಸ್ಥೆ ನಿರ್ದೇಶಕರು ಮತ್ತು ಮನೋವೈದ್ಯರಾದ ಡಾ. ಪಿ. ವಿ ಭಂಡಾರಿ ಅವರು ಕುಡಿತದ ಹಿಂತೆಗೆತದ ಚಿಹ್ನೆಗಳು ಮತ್ತು ಮಾನಸಿಕ ಸಮಸ್ಯೆಗಳು ಮತ್ತು ಅದರ ಚಿಕಿತ್ಸೆ ಮತ್ತು ಅನಾಮಿಕ ಅಮಲಿಗಳ ಸಭೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ನಶೆ ಮುಕ್ತ ಅಭಿಯಾನದ ಅಂಗವಾಗಿ ಯುವ ಜನತೆಯಲ್ಲಿ ಮದ್ಯ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತಾಗಿ ಜಾಗೃತಿ ಮೂಡಿಸುವ ಕಿರು ಚಿತ್ರವನ್ನು ಮಾನ್ಯ ಜಿಲ್ಲಾಧಿಕಾರಿ ಕೂರ್ಮರಾವ್. ಎಂ ಅವರು ಬಿಡುಗಡೆಗೊಳಿಸಿದರು.
ಕುಮಾರಿ ಚಂದ್ರಿಕಾ ಪ್ರಾರ್ಥಿಸಿದರು, ಡಾ.ಮಾನಸ್ ಸ್ವಾಗತಿಸಿದರು, ಡಾ.ವಿರೂಪಾಕ್ಷ ದೇವರಮನೆ ಅವರು ವಂದಿಸಿದರು, ಸೌಜನ್ಯ ಶೆಟ್ಟಿ ಮತ್ತು ಪದ್ಮ ರಾಘವೇಂದ್ರ ನಿರೂಪಿಸಿದರು.
Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago