ಉಡುಪಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವಂತೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದೆ.
ಕೆ ಜೆ ಜಾರ್ಜ್ ಅವರು ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಅತ್ಯುನ್ನತವಾದ ಸೇವೆಯನ್ನು ನೀಡಿರುತ್ತಾರೆ. ಕ್ರೈಸ್ತ ಸಮುದಾಯಕ್ಕೆ ಈ ವರೆಗೆ ಇಂತಹ ಉನ್ನತ ಹುದ್ದೆ ಲಭಿಸಿಲ್ಲ ಈ ಬಾರಿಯಾದರೂ ಇಂತಹ ಅವಕಾಶ ಒದಗಿ ಬರಲಿದೆ ಎಂಬ ಆಶಾಭಾವನೆಯಿದ್ದು ಈ ನಿಟ್ಟಿನಲ್ಲಿ ಪಕ್ಷ ಗಮನ ಹರಿಸಬೇಕಾಗಿದೆ.
ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ,
ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 23 ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಅವಕಾಶ ವಂಚಿತವಾಗಿದ್ದು ಈ ಬಾರಿ ಡಿ ಕೆ ಶಿವಕುಮಾರ್ ಅವರು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಮೆಲ್ವಿನ್ ಆರಾನ್ಹಾ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…