ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು ಲಕ್ಷ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲಕರೊಬ್ಬರಿಗೆ ಸೆ.11ರಂದು ಅಪರಿಚಿತರು ಕರೆ ಮಾಡಿ, ಅಕ್ರಮ ಜಾಹೀರಾತು, ಸಂದೇಶ ಕಳುಹಿಸುವುದಕ್ಕೆ ನಿಮ್ಮ ಮೇಲೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ನಿಮ್ಮ ಮೇಲೆ ಅರೆಸ್ಟ್ ವಾರಂಟ್ ಆಗಿರುವುದಾಗಿ ಬೆದರಿಸಿದರು. ನಂತರ ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿ ವಾಟ್ಸಪ್ ವಿಡಿಯೋ ಕರೆ ಮಾಡಿ, ಮನಿ ಲಾಂಡ್ರಿಂಗ್ ಕೇಸ್ನಲ್ಲಿ ಭಾಗಿಯಾಗಿ ರುವುದಾಗಿ ತಿಳಿಸಿ ಆದಾಯದ ಮೂಲ ಪರಿಶೀಲನೆ ಮಾಡುವುದಾಗಿ ಹೇಳಿ, ವರ್ಚುವಲ್ ಅರೆಸ್ಟ್ ಮಾಡುವುದಾಗಿ ಬೆದರಿಸಿದರು. ಅದರಂತೆ ಸಂತೋಷ್ ಕುಮಾರ್ರನ್ನು ಬೆದರಿಸಿ ಅವರಿಂದ 89,00,000ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿ ಕೊಂಡು ವಂಚನೆ ಎಸಗಿದ್ದರು. ಈ ಬಗ್ಗೆ ಸಂತೋಷ ಕುಮಾರ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು ಕೇರಳ ರಾಜ್ಯ ಮತ್ತು ಮಹಾರಾಷ್ಟ ರಾಜ್ಯದ ಪುಣೆ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ಕಿರಣ್ನನ್ನು ಧಾರವಾಡದಲ್ಲಿ ಬಂಧಿಸಿ, ಒಂದು ಮೊಬೈಲ್ ಫೋನ್ ಹಾಗೂ 5 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿತು. ಈ ಹಿಂದೆ ಕೇರಳ ರಾಜ್ಯದ ಮೊಹಮ್ಮದ್ ನಿಶಾಮ್ ಸಿ.ಕೆ. ಎಂಬವರ ಖಾತೆಗೆ ಈ ಪ್ರಕರಣಕ್ಕೆ ಸಂಬಂಧಿಸಿ ಜಮೆ ಆಗಿರುವ 2 ಲಕ್ಷ ರೂ. ಹಣವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…