ಉಡುಪಿ

ಉಡುಪಿ : ಡಿಸಿ ವಿರುದ್ಧ ಕ್ರಮ ಕೈಗೊಂಡರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ – vishwanews24

ಉಡುಪಿ : ಡಿಸಿ ವಿರುದ್ಧ ಕ್ರಮ ಕೈಗೊಂಡರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದುವರೆಗೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದು, ಇದೀಗ ಪರ್ಯಾಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಭಗವಾಧ್ವಜ ಹಾರಿಸಿದ ವಿಚಾರವನ್ನು ವಿವಾದವಾಗಿ ಸೃಷ್ಟಿಸಿ ಉಡುಪಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಮತೀಯ ಶಕ್ತಿಗಳನ್ನು ಖುಷಿ ಪಡಿಸಲು ಮುಂದಾಗಿರುವುದು ದುರಂತ.

ಈ ಎಲ್ಲಾ ಬೆಳವಣಿಗೆಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಬಗ್ಗೆ ತೋರಿದ ನಿರ್ಲಕ್ಷ್ಯ ಧೋರಣೆಯೇ ಮುಖ್ಯ ಕಾರಣ. ಕಳೆದ ಹಲವು ದಶಕಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಉಡುಪಿಯ ಪರ್ಯಾಯೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯವಾಗಿದೆ. ಉಡುಪಿ ಜಿಲ್ಲೆಗೆ ಅತಿಥಿಯಂತೆ ಭೇಟಿ ನೀಡುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರು ಈ ಬಾರಿಯ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಿಲ್ಲ.

ಅಲ್ಲದೆ ಕರಾವಳಿ ಕರ್ನಾಟಕದ ನಾಡಹಬ್ಬ ಎನಿಸಿರುವ ಉಡುಪಿ ಪರ್ಯಾಯ ಮಹೋತ್ಸವ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಉಡುಪಿ ಜಿಲ್ಲೆಯ ಸಮಸ್ತ ಜನತೆಗೆ ಅಪಮಾನ ಮಾಡಿರುವುದು ವಾಸ್ತವ. ಕಾಂಗ್ರೆಸ್ ಮಾಡಿರುವ ಮನವಿಗೆ ಸರ್ಕಾರ ಮಣಿದು ಒಂದು ವೇಳೆ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಂಡರೆ ಜಿಲ್ಲಾ ಕಾಂಗ್ರೆಸ್‌ಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago