ಉಡುಪಿ: ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದುವರೆಗೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದು, ಇದೀಗ ಪರ್ಯಾಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಭಗವಾಧ್ವಜ ಹಾರಿಸಿದ ವಿಚಾರವನ್ನು ವಿವಾದವಾಗಿ ಸೃಷ್ಟಿಸಿ ಉಡುಪಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಮತೀಯ ಶಕ್ತಿಗಳನ್ನು ಖುಷಿ ಪಡಿಸಲು ಮುಂದಾಗಿರುವುದು ದುರಂತ.
ಈ ಎಲ್ಲಾ ಬೆಳವಣಿಗೆಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಬಗ್ಗೆ ತೋರಿದ ನಿರ್ಲಕ್ಷ್ಯ ಧೋರಣೆಯೇ ಮುಖ್ಯ ಕಾರಣ. ಕಳೆದ ಹಲವು ದಶಕಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಉಡುಪಿಯ ಪರ್ಯಾಯೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯವಾಗಿದೆ. ಉಡುಪಿ ಜಿಲ್ಲೆಗೆ ಅತಿಥಿಯಂತೆ ಭೇಟಿ ನೀಡುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರು ಈ ಬಾರಿಯ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಿಲ್ಲ.
ಅಲ್ಲದೆ ಕರಾವಳಿ ಕರ್ನಾಟಕದ ನಾಡಹಬ್ಬ ಎನಿಸಿರುವ ಉಡುಪಿ ಪರ್ಯಾಯ ಮಹೋತ್ಸವ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಉಡುಪಿ ಜಿಲ್ಲೆಯ ಸಮಸ್ತ ಜನತೆಗೆ ಅಪಮಾನ ಮಾಡಿರುವುದು ವಾಸ್ತವ. ಕಾಂಗ್ರೆಸ್ ಮಾಡಿರುವ ಮನವಿಗೆ ಸರ್ಕಾರ ಮಣಿದು ಒಂದು ವೇಳೆ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಂಡರೆ ಜಿಲ್ಲಾ ಕಾಂಗ್ರೆಸ್ಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…