ಉಡುಪಿ

ಉಡುಪಿ : ಡಿಸಿ ವಿರುದ್ಧ ಕ್ರಮ ಕೈಗೊಂಡರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ – vishwanews24

ಉಡುಪಿ : ಡಿಸಿ ವಿರುದ್ಧ ಕ್ರಮ ಕೈಗೊಂಡರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದುವರೆಗೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದು, ಇದೀಗ ಪರ್ಯಾಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಭಗವಾಧ್ವಜ ಹಾರಿಸಿದ ವಿಚಾರವನ್ನು ವಿವಾದವಾಗಿ ಸೃಷ್ಟಿಸಿ ಉಡುಪಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಮತೀಯ ಶಕ್ತಿಗಳನ್ನು ಖುಷಿ ಪಡಿಸಲು ಮುಂದಾಗಿರುವುದು ದುರಂತ.

ಈ ಎಲ್ಲಾ ಬೆಳವಣಿಗೆಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಬಗ್ಗೆ ತೋರಿದ ನಿರ್ಲಕ್ಷ್ಯ ಧೋರಣೆಯೇ ಮುಖ್ಯ ಕಾರಣ. ಕಳೆದ ಹಲವು ದಶಕಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಉಡುಪಿಯ ಪರ್ಯಾಯೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯವಾಗಿದೆ. ಉಡುಪಿ ಜಿಲ್ಲೆಗೆ ಅತಿಥಿಯಂತೆ ಭೇಟಿ ನೀಡುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರು ಈ ಬಾರಿಯ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಿಲ್ಲ.

ಅಲ್ಲದೆ ಕರಾವಳಿ ಕರ್ನಾಟಕದ ನಾಡಹಬ್ಬ ಎನಿಸಿರುವ ಉಡುಪಿ ಪರ್ಯಾಯ ಮಹೋತ್ಸವ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಉಡುಪಿ ಜಿಲ್ಲೆಯ ಸಮಸ್ತ ಜನತೆಗೆ ಅಪಮಾನ ಮಾಡಿರುವುದು ವಾಸ್ತವ. ಕಾಂಗ್ರೆಸ್ ಮಾಡಿರುವ ಮನವಿಗೆ ಸರ್ಕಾರ ಮಣಿದು ಒಂದು ವೇಳೆ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಂಡರೆ ಜಿಲ್ಲಾ ಕಾಂಗ್ರೆಸ್‌ಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago