Featured

ಉಡುಪಿ : ಡಿಸೆಂಬರ್ 29 ರಿಂದ 31 ರ ವರೆಗೆ ಮಲ್ಪೆ ಬೀಚ್ ಉತ್ಸವ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ (ರಿ) ನಿರ್ಮಿತಿ ಕೇಂದ್ರ, ಪಶುಪಾಲನ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಹಾಗೂ ಸ್ಥಳೀಯ ಭಜನಾ ಮಂಡಳಿಗಳು ಉಡುಪಿ ಇವರ ಸಹಯೋಗದಲ್ಲಿ ಡಿಸೆಂಬರ್ 29 ರಿಂದ 31 ರ ವರೆಗೆ ಮಲ್ಪೆ ಬೀಚ್ನಲ್ಲಿ, ಮಲ್ಪೆ ಬೀಚ್ ಉತ್ಸವ- 2019 ನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

ಅವರು  ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಡಿಸೆಂಬರ್ 29 ರಂದು ಮಲ್ಪೆ ಬೀಚ್ ಉತ್ಸವ ಕಾರ್ಯಕ್ರಮ ಉದ್ಘಾಟಿಸಲಾಗುವುದು. ಸದರಿ ದಿನದಂದು ಮಕ್ಕಳಿಗಾಗಿ ಚಿತ್ರಕಲೆ ಸ್ಫರ್ಧೆ, ಪುರುಷರಿಗಾಗಿ ವಾಲಿಬಾಲ್ ಹಾಗೂ ಮಹಿಳೆಯರಿಗಾಗಿ ತ್ರೋಬಾಲ್ ಪಂದ್ಯಾಟ, ಮರಳು ಶಿಲ್ಪ, ಗಾಳಿಪಟ ಪ್ರದರ್ಶನ, ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆ, ಅಂಜಲಿ ವಿಲ್ಸನ್ ಡ್ಯಾನ್ಸ್ ಟ್ರೂಪ್, ಶಿರಸಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡುವ ಉದ್ಧೇಶದಿಂದಾಗಿ ಉಡುಪಿ ಜಿಲ್ಲೆಯ ಹೆಸರಾಂತ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಡಿಸೆಂಬರ್ 30 ರಂದು ಸಂಜೆ ಕರ್ನಾಟಕದ ವಿವಿಧ ಜಿಲ್ಲೆಯ ಕಲಾ ತಂಡಗಳಿಂದ ಜನಪದ ಜಾತ್ರೆ ಹಾಗೂ ಪುರುಷರಿಗಾಗಿ ಹೊನಲು ಬೆಳಕಿನ ಅವಿಭಜಿತ ಪ್ರೋ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿದ್ದು, ಡಿಸೆಂಬರ್ 31 ರಂದು ಕರಾವಳಿ ಕರ್ನಾಟಕದ ಹೆಸರಾಂತ ಕಲಾವಿದರಿಂದ ಸಂಗೀತ ರಸಮಂಜರಿ ಹಾಗೂ ನೃತ್ಯ ವೈವಿದ್ಯಮಯ ಕಾರ್ಯಕ್ರಮ ಹಾಗೂ ಅಂತರಾಷ್ಟ್ರೀಯ ಮಟ್ಟದ ಚಿತ್ರ ಕಲಾವಿದರಿಂದ ವರ್ಣ ವಸಂತ ಚಿತ್ರ ಪ್ರದರ್ಶನ ಕಾರ್ಯಕ್ರಮ ಮತ್ತು ಕೇರಳದ ಖ್ಯಾತ ಕಲಾವಿದರಿಂದ ನೃತ್ಯ ಪ್ರದರ್ಶನ ನಡೆಯಲಿದ್ದು, ಮಧ್ಯರಾತ್ರಿ 12 ಗಂಟೆಯಿಂದ 12.30 ರವರೆಗೆ ಸುಡುಮದ್ದು ಪ್ರದರ್ಶನ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಗುವುದು ಎಂದರು.

 

ಜಿಲ್ಲೆಯ ಎಲ್ಲಾ ಬೀಚ್ಗಳನ್ನು ಬ್ಲೂಫ್ಲಾಗ್ ಮಾನ್ಯತೆ ಪಡೆಯುವ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಯೋಜನೆ ಇದ್ದು, ಈ ನಿಟ್ಟಿನಲ್ಲಿ ಸರ್ವೇ ಕಾರ್ಯಗಳನ್ನು ನಡೆಸಲಾಗಿದೆ ಎಂದ ಜಿಲ್ಲಾಧಿಕಾರಿ, ಸೋಮೇಶ್ವರ ಬೀಚ್ ಹಾಗೂ ಮರವಂತೆ ಬೀಚ್ಗಳ ಅಭಿವೃದ್ದಿಗೆ ತಲಾ 5 ಕೋಟಿ ರೂ. ಮಂಜೂರಾಗಿದೆ ಹಾಗೂ ಜನವರಿಯಲ್ಲಿ ಕಾಪು ಲೈಟ್ ಉತ್ಸವ ಆಚರಿಸಲು ಸಿದ್ದತೆಗಳಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರತಿಕಾಗೋಷ್ಟಿಯಲ್ಲಿ ಉಡುಪಿ ನಗರಸಭೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ನಾಯಕ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಜರಿದ್ದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

15 hours ago