Featured

ಉಡುಪಿ : ಡಿ.ಎ.ಪಿ ಬದಲು ಪರ್ಯಾಯ ರಸಗೊಬ್ಬರ ಬಳಸಿ -Vishwanews24

ಉಡುಪಿ : ಡಿ.ಎ.ಪಿ ಬದಲು ಪರ್ಯಾಯ ರಸಗೊಬ್ಬರ ಬಳಸಿ -Vishwanews24

ಉಡುಪಿ : ಡಿ.ಎ.ಪಿ. ರಸಗೊಬ್ಬರದ ಕೇವಲ ಸಾರಜನಕ ಹಾಗೂ ರಂಜಕ ಒದಗಿಸುವ ಒಂದು ಕಾಂಪ್ಲೆಕ್ಸ್ ಗೊಬ್ಬರವಾಗಿದ್ದು, ಡಿ.ಎ.ಪಿ ಇಲ್ಲದೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಇತರ ಪರ್ಯಾಯ ರಸಗೊಬ್ಬರ ಬಳಸಿ ಸಾರಜನಕ ಹಾಗೂ ರಂಜಕ ಪೋಷಕಾಂಶಗಳನ್ನು ಬೆಳೆಗಳಿಗೆ ನೀಡಬಹುದು.

ರೈತರು ಕೇವಲ ಡಿ.ಎ.ಪಿ ಮೇಲೆ ಅವಲಂಭಿತರಾಗದೆ, ಬದಲಾಗಿ ಪೋಷಕಾಂಶಗಳನ್ನು ಒದಗಿಸುವ, ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ದರ್ಜೆಯ ರಸಗೊಬ್ಬರಗಳನ್ನು ಸಂಯೋಜಸಿ ಬಳಕೆ ಮಾಡಬಹುದು. ನೇರ ರಸಗೊಬ್ಬರಗಳಾದ ಯೂರಿಯಾ ಹಾಗೂ ರಾಕ್ ಫಾಸ್ಟೇ್ಟಟ್ ಸಂಯೋಜಿಸಿ ಅಥವ ಕಾಂಪ್ಲೆಕ್ಸ್ ಗೊಬ್ಬರಗಳಾದ 20:20:0:13 ಹಾಗೂ 10:26:26 ಗಳನ್ನು ಸಂಯೋಜಿಸಿ ಡಿ.ಎ.ಪಿ ಗೆ ಪರ್ಯಾಯವಾಗಿ ಬಳಸಬಹುದು.

100 ಕೆ.ಜಿ ಡಿ.ಎ.ಪಿ. ಪೋಷಕಾಂಶ ಒದಗಿಸಲು ಈ ಕೆಳಗಿನ ಯಾವುದೇ ಸಂಯೋಜನೆ ಬಳಸಬಹುದು:

ಮೊದಲ ಸಂಯೋಜನೆ (ನೇರ ರಸಗೊಬ್ಬರ ಬಳಸಿ) ಯೂರಿಯಾ : 40 ಕೆ. ಜಿ ಹಾಗೂ ರಾಕ್ ಫಾಸ್ಪೇಟ್ : 255 ಕೆ.ಜಿ. ಎರಡನೇ ಸಂಯೋಜನೆ (ನೇರ ಹಾಗೂ ಎನ್.ಪಿ ಕಾಂಪ್ಲೆಕ್ಸ್ ಗೊಬ್ಬರ ಬಳಸಿ) ರಾಕ್ ಫಾಸ್ಪೇಟ್ : 150 ಕೆ.ಜಿ. ಹಾಗೂ 20:20:0:13 : 90 ಕೆ.ಜಿ ಮತ್ತು ಮೂರನೇ ಸಂಯೋಜನೆ (ನೇರ ಹಾಗೂ ಎನ್.ಪಿ ಹಾಗೂ ಎನ್.ಪಿ.ಕೆ ಕಾಂಪ್ಲೆಕ್ಸ್ ಗೊಬ್ಬರ ಬಳಸಿ) ರಾಕ್ ಫಾಸ್ಪೇಟ್ : 90 ಕೆ.ಜಿ, 20:20:0:13 : 50 ಕೆ.ಜಿ ಹಾಗೂ 10:26:26 : 75 ಕೆ.ಜಿ. ರಸಗೊಬ್ಬರಗಳ ಸಂಯೋಜನೆಯನ್ನು ಬಳಸಬಹುದು.

ರೈತರು ಯಾವುದೇ ರೀತಿಯ ಆತಂಕಕ್ಕೊಳಗಾಗದೇ ಮೇಲೆ ನೀಡಿರುವ ಪರ್ಯಾಯ ರಸಗೊಬ್ಬರಗಳ ಸಂಯೋಜನೆ ಮೂಲಕ ಬದಲಿ ವ್ಯವಸ್ಥೆ ಮಾಡಿಕೊಳ್ಳಬಹುದು. ಈ ಸಂಯೋಜನೆ ಮೂಲಕ ಗೊಬ್ಬರ ಬಳಸುವುದರಿಂದ ಇಳುವರಿ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲವೆಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

18 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

18 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

18 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

21 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

21 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

21 hours ago