Featured

ಉಡುಪಿ : ಡಿ.ಎ.ಪಿ ಬದಲು ಪರ್ಯಾಯ ರಸಗೊಬ್ಬರ ಬಳಸಿ -Vishwanews24

ಉಡುಪಿ : ಡಿ.ಎ.ಪಿ ಬದಲು ಪರ್ಯಾಯ ರಸಗೊಬ್ಬರ ಬಳಸಿ -Vishwanews24

ಉಡುಪಿ : ಡಿ.ಎ.ಪಿ. ರಸಗೊಬ್ಬರದ ಕೇವಲ ಸಾರಜನಕ ಹಾಗೂ ರಂಜಕ ಒದಗಿಸುವ ಒಂದು ಕಾಂಪ್ಲೆಕ್ಸ್ ಗೊಬ್ಬರವಾಗಿದ್ದು, ಡಿ.ಎ.ಪಿ ಇಲ್ಲದೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಇತರ ಪರ್ಯಾಯ ರಸಗೊಬ್ಬರ ಬಳಸಿ ಸಾರಜನಕ ಹಾಗೂ ರಂಜಕ ಪೋಷಕಾಂಶಗಳನ್ನು ಬೆಳೆಗಳಿಗೆ ನೀಡಬಹುದು.

ರೈತರು ಕೇವಲ ಡಿ.ಎ.ಪಿ ಮೇಲೆ ಅವಲಂಭಿತರಾಗದೆ, ಬದಲಾಗಿ ಪೋಷಕಾಂಶಗಳನ್ನು ಒದಗಿಸುವ, ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ದರ್ಜೆಯ ರಸಗೊಬ್ಬರಗಳನ್ನು ಸಂಯೋಜಸಿ ಬಳಕೆ ಮಾಡಬಹುದು. ನೇರ ರಸಗೊಬ್ಬರಗಳಾದ ಯೂರಿಯಾ ಹಾಗೂ ರಾಕ್ ಫಾಸ್ಟೇ್ಟಟ್ ಸಂಯೋಜಿಸಿ ಅಥವ ಕಾಂಪ್ಲೆಕ್ಸ್ ಗೊಬ್ಬರಗಳಾದ 20:20:0:13 ಹಾಗೂ 10:26:26 ಗಳನ್ನು ಸಂಯೋಜಿಸಿ ಡಿ.ಎ.ಪಿ ಗೆ ಪರ್ಯಾಯವಾಗಿ ಬಳಸಬಹುದು.

100 ಕೆ.ಜಿ ಡಿ.ಎ.ಪಿ. ಪೋಷಕಾಂಶ ಒದಗಿಸಲು ಈ ಕೆಳಗಿನ ಯಾವುದೇ ಸಂಯೋಜನೆ ಬಳಸಬಹುದು:

ಮೊದಲ ಸಂಯೋಜನೆ (ನೇರ ರಸಗೊಬ್ಬರ ಬಳಸಿ) ಯೂರಿಯಾ : 40 ಕೆ. ಜಿ ಹಾಗೂ ರಾಕ್ ಫಾಸ್ಪೇಟ್ : 255 ಕೆ.ಜಿ. ಎರಡನೇ ಸಂಯೋಜನೆ (ನೇರ ಹಾಗೂ ಎನ್.ಪಿ ಕಾಂಪ್ಲೆಕ್ಸ್ ಗೊಬ್ಬರ ಬಳಸಿ) ರಾಕ್ ಫಾಸ್ಪೇಟ್ : 150 ಕೆ.ಜಿ. ಹಾಗೂ 20:20:0:13 : 90 ಕೆ.ಜಿ ಮತ್ತು ಮೂರನೇ ಸಂಯೋಜನೆ (ನೇರ ಹಾಗೂ ಎನ್.ಪಿ ಹಾಗೂ ಎನ್.ಪಿ.ಕೆ ಕಾಂಪ್ಲೆಕ್ಸ್ ಗೊಬ್ಬರ ಬಳಸಿ) ರಾಕ್ ಫಾಸ್ಪೇಟ್ : 90 ಕೆ.ಜಿ, 20:20:0:13 : 50 ಕೆ.ಜಿ ಹಾಗೂ 10:26:26 : 75 ಕೆ.ಜಿ. ರಸಗೊಬ್ಬರಗಳ ಸಂಯೋಜನೆಯನ್ನು ಬಳಸಬಹುದು.

ರೈತರು ಯಾವುದೇ ರೀತಿಯ ಆತಂಕಕ್ಕೊಳಗಾಗದೇ ಮೇಲೆ ನೀಡಿರುವ ಪರ್ಯಾಯ ರಸಗೊಬ್ಬರಗಳ ಸಂಯೋಜನೆ ಮೂಲಕ ಬದಲಿ ವ್ಯವಸ್ಥೆ ಮಾಡಿಕೊಳ್ಳಬಹುದು. ಈ ಸಂಯೋಜನೆ ಮೂಲಕ ಗೊಬ್ಬರ ಬಳಸುವುದರಿಂದ ಇಳುವರಿ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲವೆಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago