ಉಡುಪಿ : ಡಿ. ದೇವರಾಜ ಅರಸು ಪ್ರಶಸ್ತಿಗೆ ಮಲ್ಪೆ ರಾಘವೇಂದ್ರ ಆಯ್ಕೆ – Vishwanews24

Featured, ಉಡುಪಿ

ಉಡುಪಿ : ಡಿ. ದೇವರಾಜ ಅರಸು ಪ್ರಶಸ್ತಿಗೆ ಮಲ್ಪೆ ರಾಘವೇಂದ್ರ ಆಯ್ಕೆ

ಉಡುಪಿ : ಜಿಲ್ಲಾ ಮಟ್ಟದ ಪ್ರಥಮ ಡಿ. ದೇವರಾಜ ಅರಸು ಪ್ರಶಸ್ತಿಗೆ ಮಲ್ಪೆ ರಾಘವೇಂದ್ರ ಅವರು ಆಯ್ಕೆಯಾಗಿರುತ್ತಾರೆ. ಇವರಿಗೆ ಆ. 20 ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಡಿ.ದೇವರಾಜ ಅರಸು ರವರ 107 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು

ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಚಲನಚಿತ್ರ, ಸಾಹಿತ್ಯ, ಯಕ್ಷಗಾನ ಹೀಗೆ ಹಲವಾರು ಕ್ಷೇತ್ರದಲ್ಲಿ ದುಡಿದ ಇವರು, ಕಾಜಾರಗುತ್ತು ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದಾರೆ.

ಸಾವರ್ಕರ್‌ ಫೋಟೋ ಸುಟ್ಟ ಪ್ರಕರಣ : ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ FIR ದಾಖಲು – Vishwanews24

ಬೌದ್ಧಿಕ ಮತ್ತು ಭೌತಿಕ ಪ್ರಗತಿಗಾಗಿ ದುಡಿದಿರುವ ಇವರು, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟç ಪ್ರಶಸ್ತಿಗಳೂ ಸಹ ಇವರನ್ನು ಅರಸಿ ಬಂದಿದೆ.

ಉಡುಪಿ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಉಪಾಧ್ಯಕ್ಷರಾಗಿ, ಮಲ್ಪೆ ವಿಠೋಬ ದೇವಸ್ಥಾನದ ಅಧ್ಯಕ್ಷರಾಗಿ, ಹಿರಿಯಡ್ಕ ಸಾಹಿತ್ಯ ಸಂಘದ ಅಧ್ಯಕ್ಷರಾಗಿ, ಹಿರಿಯಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾಗಿ, ಕಟಪಾಡಿ ವಿಶ್ವನಾಥ ದೇವಸ್ಥಾನದ ಪ್ರತಿಷ್ಠಾ ಸಮಿತಿಯ ಕಾರ್ಯದರ್ಶಿಯಾಗಿ, ಮಲ್ಪೆ ಯುವಕ ಮಂಡಲದ ಅಧ್ಯಕ್ಷರಾಗಿ, ಹಳೇ ವಿದ್ಯಾರ್ಥಿ ಸಂಘಗಳ ಸ್ಥಾಪಕರಾಗಿ, ನಟ, ನಾಟಕಕಾರ, ಸ್ವಯಂಸೇವಕ, ಯಕ್ಷಗಾನ ವೇಷಧಾರಿ, ಕಾದಂಬರಿಕಾರ, ವಾಗ್ಮಿ, ಮಲ್ಪೆ, ಕಲ್ಮಾಡಿ ಹಾಗೂ ಕಾಜಾರ ಗುತ್ತುಗಳಲ್ಲಿ ಯಕ್ಷಗಾನ ಸಂಘಗಳ ಸ್ಥಾಪನೆಗೆ ಪ್ರೇರಣೆ ನೀಡಿದ ಇವರು, ದೀನ ದಲಿತರ ಬಾಳು ಬಂಗಾರವಾಗಬೇಕು ಎಂದು ದುಡಿದ ಮಲ್ಪೆ ರಾಘವೇಂದ್ರ ರವರು 40 ವರ್ಷಗಳಿಗೆ ಸುದೀರ್ಘ ಕಾಲ ಶಿಕ್ಷಕರಾಗಿ, ಇಂದೂ ಸಹ ಚೇತನದ ಚಿಲುಮೆಯಾಗಿದ್ದಾರೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ : 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್ ದಾಖಲು – Vishwanews24

 

Leave a Reply