ಉಡುಪಿ: ಡಿ.16ರಿಂದ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸಾಹು ತಿಳಿಸಿದ್ದಾರೆ.
ಉಡುಪಿ ಅಂಬಲಪಾಡಿಯ ವಸಂತ ಮಂಟಪದಲ್ಲಿ ಇಂದು ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
1.2 ಕಿ.ಮೀ ಉದ್ದದ ಮೇಲ್ಸೇತುವೆ ಜತೆ ಅಂಡರ್ಪಾಸ್ ಕಾಮಗಾರಿ ನಡೆಯಲಿದೆ. 18 ತಿಂಗಳ ಪ್ರಾಜೆಕ್ಟ್ ಇದಾಗಿದ್ದು, 23.53 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಗೊಳ್ಳಲಿದೆ. ಕಾರ್ಲಾ ಕನ್ಸ್ ಕನ್ಟ್ರಕ್ಷನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದಾರೆ ಮಾಹಿತಿ ನೀಡಿದರು.
ಸ್ಥಳೀಯರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಯೋಜನೆಯ ಮಾಹಿತಿ ಪಡೆದುಕೊಂಡರು. ಈ ನಡುವೆ ಶೀಘ್ರ ಕಾಮಗಾರಿ ಆರಂಭಿಸಲೇಬೇಕು ಎಂಬ ಒತ್ತಾಯ ಕೇಳಿಬಂತು. ಕೆಲವು ಉದ್ಯಮಿಗಳ ಒತ್ತಡಕ್ಕೆ ಮಣಿದು ಕಾಮಗಾರಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದವು. ಇದನ್ನು ಅಧಿಕಾರಿ ಅಲ್ಲಗಳೆದರು.
ಜಿಲ್ಲಾಧಿಕಾರಿಗಳು ಸೂಚಿಸಿದಂತೆ ಸೋಮವಾರದಂದು ಕಾಮಗಾರಿ ಆರಂಭಗೊಳ್ಳಲೇ ಬೇಕು. ನಾಳೆಯೆ ಕಾಮಗಾರಿಯ ನೀಲಿ ನಕಾಶೆಯನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಅದಕ್ಕೆ ಅವರು ಒಪ್ಪಿಗೆ ಸೂಚಿಸಿದರು.
ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಹಲವು ಸಮಯಗಳ ಬೇಡಿಕೆ ಇದಾಗಿದೆ. 39 ಕೋಟಿಯ ಕಾಮಗಾರಿಯನ್ನು 23 ಕೋಟಿಗೆ ತೆಗೆದುಕೊಂಡಿದ್ದಾರೆ. ಕಡಿಮೆ ಹಣಕ್ಕೆ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ ಎಂದು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ, ಗುಣಮಟ್ಟದಲ್ಲಿ ಕಾಮಗಾರಿ ಮಾಡಬೇಕು ಎಂದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…