ಉಡುಪಿ: ಡಿ.16ರಿಂದ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸಾಹು ತಿಳಿಸಿದ್ದಾರೆ.
ಉಡುಪಿ ಅಂಬಲಪಾಡಿಯ ವಸಂತ ಮಂಟಪದಲ್ಲಿ ಇಂದು ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
1.2 ಕಿ.ಮೀ ಉದ್ದದ ಮೇಲ್ಸೇತುವೆ ಜತೆ ಅಂಡರ್ಪಾಸ್ ಕಾಮಗಾರಿ ನಡೆಯಲಿದೆ. 18 ತಿಂಗಳ ಪ್ರಾಜೆಕ್ಟ್ ಇದಾಗಿದ್ದು, 23.53 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಗೊಳ್ಳಲಿದೆ. ಕಾರ್ಲಾ ಕನ್ಸ್ ಕನ್ಟ್ರಕ್ಷನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದಾರೆ ಮಾಹಿತಿ ನೀಡಿದರು.
ಸ್ಥಳೀಯರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಯೋಜನೆಯ ಮಾಹಿತಿ ಪಡೆದುಕೊಂಡರು. ಈ ನಡುವೆ ಶೀಘ್ರ ಕಾಮಗಾರಿ ಆರಂಭಿಸಲೇಬೇಕು ಎಂಬ ಒತ್ತಾಯ ಕೇಳಿಬಂತು. ಕೆಲವು ಉದ್ಯಮಿಗಳ ಒತ್ತಡಕ್ಕೆ ಮಣಿದು ಕಾಮಗಾರಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದವು. ಇದನ್ನು ಅಧಿಕಾರಿ ಅಲ್ಲಗಳೆದರು.
ಜಿಲ್ಲಾಧಿಕಾರಿಗಳು ಸೂಚಿಸಿದಂತೆ ಸೋಮವಾರದಂದು ಕಾಮಗಾರಿ ಆರಂಭಗೊಳ್ಳಲೇ ಬೇಕು. ನಾಳೆಯೆ ಕಾಮಗಾರಿಯ ನೀಲಿ ನಕಾಶೆಯನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಅದಕ್ಕೆ ಅವರು ಒಪ್ಪಿಗೆ ಸೂಚಿಸಿದರು.
ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಹಲವು ಸಮಯಗಳ ಬೇಡಿಕೆ ಇದಾಗಿದೆ. 39 ಕೋಟಿಯ ಕಾಮಗಾರಿಯನ್ನು 23 ಕೋಟಿಗೆ ತೆಗೆದುಕೊಂಡಿದ್ದಾರೆ. ಕಡಿಮೆ ಹಣಕ್ಕೆ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ ಎಂದು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ, ಗುಣಮಟ್ಟದಲ್ಲಿ ಕಾಮಗಾರಿ ಮಾಡಬೇಕು ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…