ಉಡುಪಿ: ರಾಜ್ಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. 17ರಂದು ಶನಿವಾರ ರಾಜ್ಯವ್ಯಾಪಿ ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್ ಒಕ್ಕೂಟದಿಂದ ಕಾಲೇಜ್ಗಳನ್ನು ಬಂದ್ ಆಚರಿಸಲಾಗುವುದೆಂದು ಎನ್ಎಸ್ಯುಐನ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ತಿಳಿಸಿದರು.
ನಗರದಲ್ಲಿ ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿ ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣಕ್ಕೆ ಮುಂದಾಗಿವೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಪರೀಕ್ಷೆಗಳ ಫಲಿತಾಂಶ ನಿಗದಿತ ಅವಧಿಗಿಂತ ಕೆಲವು ದಿನ ಮೊದಲು ಅಥವಾ ತಡವಾಗಿ ಬರುತ್ತಿದ್ದವು.ಆದರೆ ಈಗ ವರ್ಷವೇ ಕಳೆದರೂ ಪರೀಕ್ಷಾ ಫಲಿತಾಂಶ ಪ್ರಕಟಿಸುತ್ತಿಲ್ಲ. ಸರ್ಕಾರಿ ಕಾಲೇಜ್ ಗಳಲ್ಲೂ ಶುಲ್ಕ ಏರಿಸಲಾಗಿದೆ. ವಿದ್ಯಾರ್ಥಿ ವೇತನ ನೀಡುತ್ತಿಲ್ಲ ಎಂದರು.
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಸ್ವಯಂ ಪ್ರೇರಿತರಾಗಿ ಸಮಸ್ಯೆ ಬಗೆಹರಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಸಂಘಟನೆಯೊಂದಿಗೆ ಕೈಜೋಡಿಸಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಪದಾಧಿಕಾರಿಗಳಾದ ಅನೀಶ್ ಪೂಜಾರಿ, ಶರತ್ ಕುಂದರ್, ಸೈಯ್ಯದ್ ಪುರ್ಕಾನ್ ರಕ್ಷಿತ್ ರಾಜ್, ಶ್ರೇಯಸ್ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…