ಉಡುಪಿ: ಉಡುಪಿ ಜಿಲ್ಲಾ ಮರಾಠಿ ಸೇವಾ ಸಂಘ, ಜಿಲ್ಲಾ ಮರಾಠಿ ಮಹಿಳಾ ವೇದಿಕೆ, ಜಿಲ್ಲಾ ಮರಾಠಿ ಯುವ ಸಂಘಟನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಡಿ.21ರ ಭಾನುವಾರದಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಕುಂಜಿಬೆಟ್ಟುವಿನ ಶ್ರೀ ತುಳಜಾ ಭವಾನಿ ಮರಾಠಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಮರಾಟಿ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ್ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭಕ್ಕೂ ಮೊದಲು ಅಂದು ಬೆಳಿಗ್ಗೆ 8:30ಕ್ಕೆ ರಾಜೇಶ್ ಪ್ರಸಾದ್ ಅವರನ್ನು ಪರ್ಕಳದ ಸ್ವಗೃಹದಿಂದ ವಾಹನ ಜಾಥಾದ ಮೂಲಕ ಕುಂಜಿಬೆಟ್ಟಿನ ಎಂ.ಜಿ.ಎಂ. ಮೈದಾನಕ್ಕೆ ಕರೆದುಕೊಂಡು ಬರಲಾಗುವುದು. ಅಲ್ಲಿಂದ ತೆರದ ವಾಹನದಲ್ಲಿ ಚೆಂಡೆ, ಕೊಂಬು ಹಾಗೂ ಪೂರ್ಣಕುಂಭ ಮೇಳದೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಸಮುದಾಯ ಭವನಕ್ಕೆ ಸ್ವಾಗತಿಸಲಾಗುವುದು ಎಂದರು.
ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮರಾಠಿ ಸಮಾಜದ ಮುಖಂಡರಾದ ಉಮೇಶ್ ನಾಯ್ಕ್ ಚೇರ್ಕಾಡಿ, ಭುಜಂಗ್ ನಾಯ್ಕ್ ಇದ್ದರು.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…