Featured

ಉಡುಪಿ: ಡಿ. 21ರಂದು ಮಿಸ್ಟರ್ ಕರ್ನಾಟಕ-2024 ಹಾಗೂ ಮಿಸ್ಟರ್ ಉಡುಪಿ-2024 ದೇಹದಾರ್ಡ್ಯ ಸ್ಪರ್ಧೆ – vishwanews24

ಉಡುಪಿ: ಡಿ. 21ರಂದು ಮಿಸ್ಟರ್ ಕರ್ನಾಟಕ-2024″ ಹಾಗೂ ಮಿಸ್ಟರ್ ಉಡುಪಿ-2024″ ದೇಹದಾರ್ಡ್ಯ ಸ್ಪರ್ಧೆ

ಉಡುಪಿ: ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ವತಿಯಿಂದ “ಮಿಸ್ಟರ್ ಕರ್ನಾಟಕ-2024″ ಹಾಗೂ ಮಿಸ್ಟರ್ ಉಡುಪಿ-2024” ದೇಹದಾರ್ಡ್ಯ ಸ್ಪರ್ಧೆಯನ್ನು ಇದೇ ಡಿ. 21ರಂದು ಅಂಬಲಪಾಡಿಯ ಶಾಮಿಲಿ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೇಸನ್ ಡಯಾಸ್ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ದೇಹದಾರ್ಡ್ಯ ಸ್ಪರ್ಧೆಯು ಮಿ. ಕರ್ನಾಟಕ, ಬೆಸ್ಟ್ ಪೊಸರ್, ದಿವ್ಯಾಂಗ, ಮಾಸ್ಟರ್, ಮೈಕಟ್ಟು ಹಾಗೂ ಮಿ. ಉಡುಪಿ ವಿಭಾಗದಲ್ಲಿ ನಡೆಯಲಿದೆ. ಮಿ. ಕರ್ನಾಟಕ ಸ್ಪರ್ಧೆಯು 55, 60, 65, 70, 75, 80, 85 ಹಾಗೂ 85 ಕೆ.ಜಿ. ಕ್ಕಿಂತ ಮೇಲ್ಪಟ್ಟ ತೂಕದ ವಿಭಾಗದಲ್ಲಿ ನಡೆಯಲಿದ್ದು, ಮಿ. ಕರ್ನಾಟಕ ಟೈಟಲ್ ಪ್ರಶಸ್ತಿ ವಿಜೇತರಿಗೆ 55,555 ನಗದು ಮತ್ತು ಟ್ರೋಫಿ, ರನ್ನರ್ ಅಪ್ ಪ್ರಶಸ್ತಿ ವಿಜೇತರಿಗೆ 22,222 ನಗದು ಬಹುಮಾನ ನೀಡಲಾಗುವುದು. ಪ್ರತಿ ವಿಭಾಗದಲ್ಲಿ ವಿಜೇತರಾಗುವ ಮೊದಲ ಐದು ಸ್ಪರ್ಧಿಗಳಿಗೆ ಕ್ರಮವಾಗಿ 10 ಸಾವಿರ, 8 ಸಾವಿರ, 6 ಸಾವಿರ, 4 ಸಾವಿರ ಹಾಗೂ 2 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದರು.

ಬೆಸ್ಟ್ ಪೊಸರ್ ಸ್ಪರ್ಧೆಯಲ್ಲಿ ವಿಜೇತರಾಗುವ ಸ್ಪರ್ಧಿಗೆ 5,555 ರೂ. ನಗದು ಬಹುಮಾನ ಹಾಗೂ ದಿವ್ಯಾಂಗ ವಿಭಾಗದಲ್ಲಿ ವಿಜೇತರಾಗುವ ಮೊದಲ ಐದು ಸ್ಪರ್ಧಿಗಳಿಗೆ ಕ್ರಮವಾಗಿ 10 ಸಾವಿರ, 8 ಸಾವಿರ, 6 ಸಾವಿರ, 4 ಸಾವಿರ ಹಾಗೂ 2 ಸಾವಿರ ನಗದು ಹಾಗೂ ಭಾಗವಹಿಸುವ ಎಲ್ಲ ದಿವ್ಯಾಂಗ ಸ್ಪರ್ಧಿಗಳಿಗೆ 1,500 ಸಾವಿರ ನಗದು ಬಹುಮಾನ ನೀಡಲಾಗುವುದು.

ಮಾಸ್ಟರ್ ವಿಭಾಗದಲ್ಲಿ 40, 50 ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ ವಯೋಮಿತಿಯಲ್ಲಿ ಸ್ಪರ್ಧೆ ನಡೆಯಲಿದ್ದು, ಟೈಟಲ್ ಪ್ರಶಸ್ತಿ ಪಡೆಯುವ ಸ್ಪರ್ಧಿಗೆ 10 ಸಾವಿರ ನಗದು ಹಾಗೂ ಟಾಪ್ 5 ಸ್ಪರ್ಧಿಗಳಿಗೆ ಕ್ರಮವಾಗಿ 5 ಸಾವಿರ, 4 ಸಾವಿರ, 3 ಸಾವಿರ, 2 ಸಾವಿರ ಹಾಗೂ 1 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಪುರುಷರ ಮೈಕಟ್ಟು ವಿಭಾಗದಲ್ಲಿ ಟೈಟಲ್ ಪ್ರಶಸ್ತಿ ಪಡೆಯುವ ಸ್ಪರ್ಧಿಗೆ 22,222 ಸಾವಿರ ನಗದು, ಉಳಿದಂತೆ ದ್ವಿತೀಯ,‌ ತೃತೀಯ, ಚತುರ್ಥ, ಪಂಚಮ ಸ್ಥಾನ ಪಡೆಯುವ ಸ್ಪರ್ಧಿಗಳಿಗೆ ಕ್ರಮವಾಗಿ 11,111 ಸಾವಿರ ನಗದು, 7,777 ಸಾವಿರ ನಗದು, 5,555 ಸಾವಿರ ನಗದು ಹಾಗೂ 3,333 ಸಾವಿರ ನಗದು ಬಹುಮಾನ ನೀಡಲಾಗುವುದು. ಮಿ. ಉಡುಪಿ ಸ್ಪರ್ಧೆಯು 55, 60, 65, 70, 75, 80, 85 ಹಾಗೂ 85 ಕೆ.ಜಿ. ಕ್ಕಿಂತ ಮೇಲ್ಪಟ್ಟ ತೂಕದ ವಿಭಾಗದಲ್ಲಿ ನಡೆಯಲಿದ್ದು, ಟೈಟಲ್ ಪ್ರಶಸ್ತಿ ಪಡೆಯುವ ಸ್ಪರ್ಧಿಗೆ 15 ಸಾವಿರ ನಗದು ಮತ್ತು ಟ್ರೋಫಿ, ರನ್ನರ್ ಅಪ್ ಪ್ರಶಸ್ತಿ ವಿಜೇತರಿಗೆ 7,777 ನಗದು ಹಾಗೂ ಬೆಸ್ಟ್ ಪೊಸರ್ ಗೆ 5,555 ನಗದು ಬಹುಮಾನ ನೀಡಲಾಗುವುದು.

ಪ್ರತಿ ವಿಭಾಗದಲ್ಲಿ ವಿಜೇತರಾಗುವ ಮೊದಲ ಐದು ಸ್ಪರ್ಧಿಗಳಿಗೆ ಕ್ರಮವಾಗಿ 5 ಸಾವಿರ, 4 ಸಾವಿರ, 3 ಸಾವಿರ, 2 ಸಾವಿರ ಹಾಗೂ 1 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಅಂದು ಮಧ್ಯಾಹ್ನ 1.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಉದ್ಯಮಿಗಳಾದ ಜೆರ್ರಿ ವಿನ್ಸೆಂಟ್ ಡಯಾಸ್, ಜಿ. ಶಂಕರ್ ಹಾಗೂ ಪುರುಷೋತ್ತಮ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 2 ಗಂಟೆಯಿಂದ ಸ್ಪರ್ಧೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಕಾಮತ್, ಕೋಶಾಧಿಕಾರಿ ಮಾರುತಿ ಜಿ. ಬಂಗೇರ, ರಾಷ್ಟ್ರೀಯ ತೀರ್ಪುಗಾರರಾದ ಜಾನ್ಸನ್ ಅರುಣ್ ಡಿಸೋಜ, ರಾಘವೇಂದ್ರ ಇದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

19 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

19 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago