Featured

ಉಡುಪಿ: ಡಿ. 21ರಂದು ಮಿಸ್ಟರ್ ಕರ್ನಾಟಕ-2024 ಹಾಗೂ ಮಿಸ್ಟರ್ ಉಡುಪಿ-2024 ದೇಹದಾರ್ಡ್ಯ ಸ್ಪರ್ಧೆ – vishwanews24

ಉಡುಪಿ: ಡಿ. 21ರಂದು ಮಿಸ್ಟರ್ ಕರ್ನಾಟಕ-2024″ ಹಾಗೂ ಮಿಸ್ಟರ್ ಉಡುಪಿ-2024″ ದೇಹದಾರ್ಡ್ಯ ಸ್ಪರ್ಧೆ

ಉಡುಪಿ: ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ವತಿಯಿಂದ “ಮಿಸ್ಟರ್ ಕರ್ನಾಟಕ-2024″ ಹಾಗೂ ಮಿಸ್ಟರ್ ಉಡುಪಿ-2024” ದೇಹದಾರ್ಡ್ಯ ಸ್ಪರ್ಧೆಯನ್ನು ಇದೇ ಡಿ. 21ರಂದು ಅಂಬಲಪಾಡಿಯ ಶಾಮಿಲಿ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೇಸನ್ ಡಯಾಸ್ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ದೇಹದಾರ್ಡ್ಯ ಸ್ಪರ್ಧೆಯು ಮಿ. ಕರ್ನಾಟಕ, ಬೆಸ್ಟ್ ಪೊಸರ್, ದಿವ್ಯಾಂಗ, ಮಾಸ್ಟರ್, ಮೈಕಟ್ಟು ಹಾಗೂ ಮಿ. ಉಡುಪಿ ವಿಭಾಗದಲ್ಲಿ ನಡೆಯಲಿದೆ. ಮಿ. ಕರ್ನಾಟಕ ಸ್ಪರ್ಧೆಯು 55, 60, 65, 70, 75, 80, 85 ಹಾಗೂ 85 ಕೆ.ಜಿ. ಕ್ಕಿಂತ ಮೇಲ್ಪಟ್ಟ ತೂಕದ ವಿಭಾಗದಲ್ಲಿ ನಡೆಯಲಿದ್ದು, ಮಿ. ಕರ್ನಾಟಕ ಟೈಟಲ್ ಪ್ರಶಸ್ತಿ ವಿಜೇತರಿಗೆ 55,555 ನಗದು ಮತ್ತು ಟ್ರೋಫಿ, ರನ್ನರ್ ಅಪ್ ಪ್ರಶಸ್ತಿ ವಿಜೇತರಿಗೆ 22,222 ನಗದು ಬಹುಮಾನ ನೀಡಲಾಗುವುದು. ಪ್ರತಿ ವಿಭಾಗದಲ್ಲಿ ವಿಜೇತರಾಗುವ ಮೊದಲ ಐದು ಸ್ಪರ್ಧಿಗಳಿಗೆ ಕ್ರಮವಾಗಿ 10 ಸಾವಿರ, 8 ಸಾವಿರ, 6 ಸಾವಿರ, 4 ಸಾವಿರ ಹಾಗೂ 2 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದರು.

ಬೆಸ್ಟ್ ಪೊಸರ್ ಸ್ಪರ್ಧೆಯಲ್ಲಿ ವಿಜೇತರಾಗುವ ಸ್ಪರ್ಧಿಗೆ 5,555 ರೂ. ನಗದು ಬಹುಮಾನ ಹಾಗೂ ದಿವ್ಯಾಂಗ ವಿಭಾಗದಲ್ಲಿ ವಿಜೇತರಾಗುವ ಮೊದಲ ಐದು ಸ್ಪರ್ಧಿಗಳಿಗೆ ಕ್ರಮವಾಗಿ 10 ಸಾವಿರ, 8 ಸಾವಿರ, 6 ಸಾವಿರ, 4 ಸಾವಿರ ಹಾಗೂ 2 ಸಾವಿರ ನಗದು ಹಾಗೂ ಭಾಗವಹಿಸುವ ಎಲ್ಲ ದಿವ್ಯಾಂಗ ಸ್ಪರ್ಧಿಗಳಿಗೆ 1,500 ಸಾವಿರ ನಗದು ಬಹುಮಾನ ನೀಡಲಾಗುವುದು.

ಮಾಸ್ಟರ್ ವಿಭಾಗದಲ್ಲಿ 40, 50 ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ ವಯೋಮಿತಿಯಲ್ಲಿ ಸ್ಪರ್ಧೆ ನಡೆಯಲಿದ್ದು, ಟೈಟಲ್ ಪ್ರಶಸ್ತಿ ಪಡೆಯುವ ಸ್ಪರ್ಧಿಗೆ 10 ಸಾವಿರ ನಗದು ಹಾಗೂ ಟಾಪ್ 5 ಸ್ಪರ್ಧಿಗಳಿಗೆ ಕ್ರಮವಾಗಿ 5 ಸಾವಿರ, 4 ಸಾವಿರ, 3 ಸಾವಿರ, 2 ಸಾವಿರ ಹಾಗೂ 1 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಪುರುಷರ ಮೈಕಟ್ಟು ವಿಭಾಗದಲ್ಲಿ ಟೈಟಲ್ ಪ್ರಶಸ್ತಿ ಪಡೆಯುವ ಸ್ಪರ್ಧಿಗೆ 22,222 ಸಾವಿರ ನಗದು, ಉಳಿದಂತೆ ದ್ವಿತೀಯ,‌ ತೃತೀಯ, ಚತುರ್ಥ, ಪಂಚಮ ಸ್ಥಾನ ಪಡೆಯುವ ಸ್ಪರ್ಧಿಗಳಿಗೆ ಕ್ರಮವಾಗಿ 11,111 ಸಾವಿರ ನಗದು, 7,777 ಸಾವಿರ ನಗದು, 5,555 ಸಾವಿರ ನಗದು ಹಾಗೂ 3,333 ಸಾವಿರ ನಗದು ಬಹುಮಾನ ನೀಡಲಾಗುವುದು. ಮಿ. ಉಡುಪಿ ಸ್ಪರ್ಧೆಯು 55, 60, 65, 70, 75, 80, 85 ಹಾಗೂ 85 ಕೆ.ಜಿ. ಕ್ಕಿಂತ ಮೇಲ್ಪಟ್ಟ ತೂಕದ ವಿಭಾಗದಲ್ಲಿ ನಡೆಯಲಿದ್ದು, ಟೈಟಲ್ ಪ್ರಶಸ್ತಿ ಪಡೆಯುವ ಸ್ಪರ್ಧಿಗೆ 15 ಸಾವಿರ ನಗದು ಮತ್ತು ಟ್ರೋಫಿ, ರನ್ನರ್ ಅಪ್ ಪ್ರಶಸ್ತಿ ವಿಜೇತರಿಗೆ 7,777 ನಗದು ಹಾಗೂ ಬೆಸ್ಟ್ ಪೊಸರ್ ಗೆ 5,555 ನಗದು ಬಹುಮಾನ ನೀಡಲಾಗುವುದು.

ಪ್ರತಿ ವಿಭಾಗದಲ್ಲಿ ವಿಜೇತರಾಗುವ ಮೊದಲ ಐದು ಸ್ಪರ್ಧಿಗಳಿಗೆ ಕ್ರಮವಾಗಿ 5 ಸಾವಿರ, 4 ಸಾವಿರ, 3 ಸಾವಿರ, 2 ಸಾವಿರ ಹಾಗೂ 1 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಅಂದು ಮಧ್ಯಾಹ್ನ 1.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಉದ್ಯಮಿಗಳಾದ ಜೆರ್ರಿ ವಿನ್ಸೆಂಟ್ ಡಯಾಸ್, ಜಿ. ಶಂಕರ್ ಹಾಗೂ ಪುರುಷೋತ್ತಮ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 2 ಗಂಟೆಯಿಂದ ಸ್ಪರ್ಧೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಕಾಮತ್, ಕೋಶಾಧಿಕಾರಿ ಮಾರುತಿ ಜಿ. ಬಂಗೇರ, ರಾಷ್ಟ್ರೀಯ ತೀರ್ಪುಗಾರರಾದ ಜಾನ್ಸನ್ ಅರುಣ್ ಡಿಸೋಜ, ರಾಘವೇಂದ್ರ ಇದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago