Featured

ಉಡುಪಿ: ಡಿ.25, ಡಿ.27ರಂದು ಬಿಜೆಪಿಯಿಂದ ’ಅಟಲ್ ಸ್ಮರಣೆ’: ಕುತ್ಯಾರು ನವೀನ್ ಶೆಟ್ಟಿ – vishwanews24

ಉಡುಪಿ: ಡಿ.25, ಡಿ.27ರಂದು ಬಿಜೆಪಿಯಿಂದ ’ಅಟಲ್ ಸ್ಮರಣೆ’: ಕುತ್ಯಾರು ನವೀನ್ ಶೆಟ್ಟಿ

ಡಿ.25ರಂದು ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿ ಬಿ.ಎಲ್.ಸಂತೋಷ್ ಭಾಗಿ

ಡಿ.27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿ

ಉಡುಪಿ: ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬೈಂದೂರಿನಲ್ಲಿ ಡಿ.25ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿರುವ ‘ಸಂಸದ್ ಖೇಲ್’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿ ಬಿ.ಎಲ್.ಸಂತೋಷ್ ಪಾಲ್ಗೊಂಡು, ಸಂಜೆ ಗಂಟೆ 5ಕ್ಕೆ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ’ಅಟಲ್ ಸ್ಮರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಡಿ.27ರಂದು ಸಂಜೆ 7ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ಕಾಪು ಮಂಡಲದ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಕಡಲ ಕಿನಾರೆಯಲ್ಲಿ ನಡೆಯಲಿರುವ ’ಕಾಪು ಕಡಲ ಪರ್ಬ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡಿ.28ರಂದು ಬಿಜೆಪಿ ಕಾರ್ಕಳ ಮಂಡಲದ ನೇತೃತ್ವದಲ್ಲಿ ಸಚ್ಚರಿಪೇಟೆಯಲ್ಲಿ ಪ್ರಧಾನಿ ಮೋದಿ ಅವರ ’ಮನ್ ಕೀ ಬಾತ್’ ಕಾರ್ಯಕ್ರಮದ ಅಧಿಕೃತ ನೇರ ಪ್ರಸಾರವನ್ನು ವೀಕ್ಷಿಸಲಿದ್ದಾರೆ.

ಡಿ.24ರಂದು ಸಂಜೆ 6ಗಂಟೆಗೆ ಬಿಜೆಪಿ ಉಡುಪಿ ನಗರ ಮಂಡಲದ ವತಿಯಿಂದ ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ನೇತೃತ್ವದಲ್ಲಿ ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಅಂತರ್ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ ’ಅಟಲ್ ಟ್ರೋಫಿ’ ನಡೆಯಲಿದೆ. ಬೆಳಿಗ್ಗೆ ಗಂಟೆ 9ರಿಂದ ಮಹಿಳಾ ವಿಭಾಗದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಕೂಟ ನಡೆಯಲಿದೆ.

ಡಿ.25ರಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಉಡುಪಿ ಗ್ರಾಮಾಂತರ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬ್ರಹ್ಮಾವರ ನಂದಿಗುಡಿಯ ಬಳಿ ಪ.ಜಾ. ಸಮುದಾಯದ 14 ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ ಆಚರಣೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳ ಸಹಿತ ಜ.17ರಂದು ನಡೆಯುವ ಕರಾವಳಿಯ ನಾಡಹಬ್ಬ ’ಉಡುಪಿ ಶೀರೂರು ಮಠದ ಪರ್ಯಾಯೋತ್ಸವ’ದ ಸಂಬಂಧಿತ ಎಲ್ಲ ಕಾರ್ಯಕ್ರಮಗಳಲ್ಲಿ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸಹಿತ ಬಿಜೆಪಿ ಜಿಲ್ಲಾ ಪದಾಧಿಕಾರಿ ಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago