Featured

ಉಡುಪಿ : ಡೆಂಗ್ಯೂ ನಿಯಂತ್ರಣಕ್ಕೆ ಆದ್ಯತೆ ನೀಡಿ – ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ – vishwanews24

ಡೆಂಗ್ಯೂ ನಿಯಂತ್ರಣಕ್ಕೆ ಆದ್ಯತೆ ನೀಡಿ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ನಗರ ಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ವಿಶೇಷ ಕ್ರಮ ವಹಿಸಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ನಗರ ಸಭೆ ಕಚೇರಿಯಲ್ಲಿ ಪ್ರಕರಣಗಳ ಗಂಭೀರತೆ ಗಮನಿಸಿ ಅಧಿಕಾರಿಗಳ ತುರ್ತು ಸಭೆ ನಡೆಸಿದ ಶಾಸಕರು ನಗರದಲ್ಲಿ ಕಟ್ಟಡ ಕಾಮಗಾರಿ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡುವ ಬಗ್ಗೆ ಎಲ್ಲಾ ಸಂಸ್ಥೆಗಳಿಗೆ ಸೂಚನೆ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ರಸ್ತೆ ಬದಿ ಗೂಡಂಗಡಿಗಳ ತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ನಿರಂತರ ಫಾಗಿಂಗ್ ಪ್ರಕ್ರಿಯೆ ಮಾಡುವಂತೆ ಹೇಳಿದರು.

ನಗರ ಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಹಾಗೂ ಗಣೇಶ ಚತುರ್ಥಿ ಮೆರವಣಿಗೆ ಸಾಗುವ ರಸ್ತೆಗಳ ಕಾಮಗಾರಿಗಳನ್ನು ತುರ್ತಾಗಿ ನಡೆಸಲು ಹೇಳಿದರು.

ಸಭೆಯಲ್ಲಿ ಪೌರಾಯುಕ್ತರಾದ ರಾಯಪ್ಪ, ನಗರ ಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್ ಅಂಚನ್, ಗಿರಿಧರ್ ಆಚಾರ್ಯ, ಶ್ರೀಮತಿ ಕಲ್ಪನ ಸುಧಾಮ, ಶ್ರೀಮತಿ ಗೀತಾ ಡಿ. ಶೇಟ್, ನಗರ ಸಭೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago