ನಗರ ಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ವಿಶೇಷ ಕ್ರಮ ವಹಿಸಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.
ನಗರ ಸಭೆ ಕಚೇರಿಯಲ್ಲಿ ಪ್ರಕರಣಗಳ ಗಂಭೀರತೆ ಗಮನಿಸಿ ಅಧಿಕಾರಿಗಳ ತುರ್ತು ಸಭೆ ನಡೆಸಿದ ಶಾಸಕರು ನಗರದಲ್ಲಿ ಕಟ್ಟಡ ಕಾಮಗಾರಿ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡುವ ಬಗ್ಗೆ ಎಲ್ಲಾ ಸಂಸ್ಥೆಗಳಿಗೆ ಸೂಚನೆ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ರಸ್ತೆ ಬದಿ ಗೂಡಂಗಡಿಗಳ ತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ನಿರಂತರ ಫಾಗಿಂಗ್ ಪ್ರಕ್ರಿಯೆ ಮಾಡುವಂತೆ ಹೇಳಿದರು.
ನಗರ ಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಹಾಗೂ ಗಣೇಶ ಚತುರ್ಥಿ ಮೆರವಣಿಗೆ ಸಾಗುವ ರಸ್ತೆಗಳ ಕಾಮಗಾರಿಗಳನ್ನು ತುರ್ತಾಗಿ ನಡೆಸಲು ಹೇಳಿದರು.
ಸಭೆಯಲ್ಲಿ ಪೌರಾಯುಕ್ತರಾದ ರಾಯಪ್ಪ, ನಗರ ಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್ ಅಂಚನ್, ಗಿರಿಧರ್ ಆಚಾರ್ಯ, ಶ್ರೀಮತಿ ಕಲ್ಪನ ಸುಧಾಮ, ಶ್ರೀಮತಿ ಗೀತಾ ಡಿ. ಶೇಟ್, ನಗರ ಸಭೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…