Featured

ಉಡುಪಿ ಡ್ರಗ್ಸ್ ಪ್ರಕರಣ : ಮಣಿಪಾಲದಲ್ಲಿ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್ ಗಳ ಬಂಧನ – Vishwanews24

ಉಡುಪಿ ಡ್ರಗ್ಸ್ ಪ್ರಕರಣ : ಮಣಿಪಾಲದಲ್ಲಿ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್  ಗಳ ಬಂಧನ

ಉಡುಪಿ, : ಉಡುಪಿಯಲ್ಲಿ ಡ್ರಗ್ಸ್ ವಿರುದ್ಧ ಪೊಲೀಸ್ ಸಮರ ಮುಂದುವರಿದಿದ್ದು. ನಗರದ ಮಣಿಪಾಲ ಠಾಣಾಧಿಕಾರಿ ಮತ್ತು ತಂಡ ಹೆರ್ಗಾ ಗ್ರಾಮದ ಹೈ ಪಾಯಿಂಟ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದಿದೆ.

ಹೆರ್ಗಾ ಗ್ರಾಮದ ಹೈ-ಪಾಯಿಂಟ್‌ ಹೈಟ್ಸ್ ಅಪಾರ್ಟ್ಮೆಂಟ್‌ ಮೇಲೆ ದಾಳಿ ಮಾಡಿ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದ ಮಣಿಪಾಲದ ಎಂ.ಐ.ಟಿ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜೊತೆಯಿದ್ದ ಕಾರ್ಕಳದ ಫೆಡ್ಲರ್‌ ಆದ ಆದಿಲ್‌ (36) ಇವರನ್ನು ವಶಕ್ಕೆ ಪಡೆದು ಸುಮಾರು 300 ಗ್ರಾಂ ಗಾಂಜಾ ವಶಕ್ಕೆಪಡೆಯಲಾಗಿದೆ. ನಂತರ ಆದಿಲ್‌ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ–ಕಾರ್ಕಳ ರಸ್ತೆಯಲ್ಲಿ ನೌಶದ್‌(27) ಎಂಬಾತನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 1 ಕೆಜಿ 100 ಗ್ರಾಂ ಗಾಂಜಾವನ್ನು ಉಡುಪಿ ಜಿಲ್ಲಾ ಪೋಲಿಸರು ವಶ ಪಡಿಸಿದ್ದಾರೆ.

ವಿಚಾರಣೆಯಿಂದ ಆದಿಲ್‌ ಮತ್ತು ನೌಶದ್‌ ಎಂಬ ಗಾಂಜಾ ಪೆಡ್ಲರ್‌ಗಳು ಆತನ ಸ್ನೇಹಿತ ಇಮ್ರಾನ್‌ ಖಾನ್‌ ಯಾನೆ ಶಕೀಲ್‌ ಎಂಬುವವನು ಮೂಲತ: ಕಾರ್ಕಳ ನಿವಾಸಿಯಾಗಿದ್ದು, ಪ್ರಸ್ತುತ ಓಮನ್‌ ದೇಶದ ಮಸ್ಕತ್‌ನಲ್ಲಿ ವಾಸವಿದ್ದು ಅಲ್ಲಿಂದ ನೌಶದ್‌ ಮತ್ತು ಆದಿಲ್‌ನನ್ನು ಸಂಪರ್ಕಿಸಿ ಕಾಸರಗೋಡಿನ ಉಪ್ಪಳದಿಂದ ಗಾಂಜಾ ಮಾರಾಟ ಮಾಡುತ್ತಿರುವುದು ತನಿಖೆಯಿಂದ ಕಂಡು ಬಂದಿದೆ.

ಪ್ರಕರಣದ ಮುಖ್ಯ ಆರೋಪಿ ಇಮ್ರಾನ್‌ ಖಾನ್‌ ನ ಪತ್ತಗೆ ಉಡುಪಿ ಎಸ್ ಪಿ ಮತ್ತು ಮಣಿಪಾಲ ಪೊಲೀಸ್‌ ನಿರೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿ ಆತನ ವಿರುದ್ಧ ಲುಕ್‌ ಔಟ್‌ ನೋಟೀಸ್‌ (ಎಲ್‌ಓಸಿ) ಹೊರಡಿಸಲು ಸೂಚಿಸಿರುತ್ತಾರೆ. ಈ ಪ್ರಕರಣದಲ್ಲಿ ವೇಳೆ ಓರ್ವ ವಿದ್ಯಾರ್ಥಿ ಪೆಡ್ಲರ್‌ ಸೇರಿದಂತೆ ಮೂರು ಜನರನ್ನು ದಸ್ತಗಿರಿ ಮಾಡಿ ಸುಮಾರು 75 ಸಾವಿರ ಮೌಲ್ಯದ 1.5 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಮಾದಕ ವಸ್ತುಗಳ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

 

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

24 minutes ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

33 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

38 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

1 hour ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

23 hours ago