ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.
ರಾಷ್ಟ್ರದಲ್ಲಿಯೇ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಮಣಿಪಾಲ ಸಹಿತ ಉಡುಪಿ ಜಿಲ್ಲೆಯ ವಿವಿಧೆಡೆ ಡ್ರಗ್ಸ್ ಸೇವನೆಯಿಂದ ವಿದ್ಯಾರ್ಥಿಗಳು, ಯುವಜನತೆ ದಾರಿತಪ್ಪುತ್ತಿದ್ದಾರೆ.
ಆದ್ದರಿಂದ ಪರಿಣಾಮಕಾರಿಯಾಗಿ ಡ್ರಗ್ಸ್ ದಂಧೆಯನ್ನು ನಿಯಂತ್ರಿಸಲು ಪ್ರತ್ಯೇಕ ವಿಶೇಷ ದಳವನ್ನು ರಚಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಉಡುಪಿ ಕ್ಷೇತ್ರದ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ ಯಶ್ ಪಾಲ್ ಸುವರ್ಣ, ಕ್ಷೇತ್ರದ ಕಡಲ್ಕೊರೆತ ತಡೆಗೋಡೆ ನಿರ್ಮಾಣ , ಕಿಂಡಿ ಅಣೆಕಟ್ಟು, ಸರಕಾರಿ ಶಾಲೆಗಳ ಅಭಿವೃದ್ಧಿ, ಹಾಸ್ಟೆಲ್ ಕಟ್ಟಡ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರುಗೊಳಿಸಿದರೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…