Featured

ಉಡುಪಿ : ತಂಬಾಕು ಮುಕ್ತ ಗ್ರಾಮವಾಗಿ ಕೋಡಿಬೆಂಗ್ರೆ ಗ್ರಾಮ -Vishwanews24

ಉಡುಪಿ : ತಂಬಾಕು ಮುಕ್ತ ಗ್ರಾಮವಾಗಿ ಕೋಡಿಬೆಂಗ್ರೆ ಗ್ರಾಮ -Vishwanews24

ಉಡುಪಿ : ಕೋಡಿಬೆಂಗ್ರೆ ಗ್ರಾಮವು ತಂಬಾಕು ಮುಕ್ತ ಗ್ರಾಮವಾಗಬೇಕು ಎಂದು 20 ವರ್ಷಗಳ ಹಿಂದೆಯೇ ಸ್ಥಳೀಯ ಗ್ರಾಮಸ್ಥರು ನಿರ್ಧರಿಸಿ, ದೃಢ ನಿರ್ದಾರದೊಂದಿಗೆ ತಂಬಾಕು ಮುಕ್ತ ಗ್ರಾಮವಾಗಿಸಿದ್ದರು. ಸರ್ಕಾರದಿಂದ ಘೋಷಣೆಯನ್ನು ಮಾಡುತ್ತಿರುವುದು ಶ್ರೀರಕ್ಷೆಯನ್ನು ಕೊಟ್ಟ ಹಾಗೆ ಆಗಿದೆ, ಇದರಿಂದ ಗ್ರಾಮದ ಗ್ರಾಮಸ್ಥರ ಜವಾಬ್ದಾರಿಯು ಹೆಚ್ಚಿದೆ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

ಅವರು ಇಂದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಘಟಕ,ಉಡುಪಿ, ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯಧಿಕಾರಿ ಕಚೇರಿ, ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಡಿಬೆಂಗ್ರೆ,ರಾಷ್ಟಿçÃಯ ಆರೋಗ್ಯ ಅಭಿಯಾನ,ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಎಲ್ಲಾ ಸಂಘ ಸಂಸ್ಥೆಗಳು ಕೋಡಿಬೆಂಗ್ರೆ ಇವರ ಸಂಯುಕ್ತ ಆಶ್ರಯದಲ್ಲಿ, ವಿಶ್ವ ತಂಬಾಕು ದಿನದ ಅಂಗವಾಗಿ ತಂಬಾಕು ಮುಕ್ತ ಕೋಡಿಬೆಂಗ್ರೆ (ಅಧಿಕೃತ ಘೋಷಣೆ ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಳೆದ 15 ವರ್ಷಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನದಿ ಕಡಲದಡದ ಗ್ರಾಮವಾದ ಕೋಡಿಬೆಂಗ್ರೆ ಗ್ರಾಮದಲ್ಲಿ ಹಿರಿಯರು ಯುವಜನರು ಸೇರಿ ಮದ್ಯ ಹಾಗೂ ತಂಬಾಕು ಮುಕ್ತ ಗ್ರಾಮವಾಗಬೇಕೆಂಬ ದೃಡ ನಿರ್ಣಯವನ್ನು ಕೈಗೊಂಡು ಪೂರ್ಣ ಗ್ರಾಮವನ್ನು ಮದ್ಯ ಹಾಗೂ ತಂಬಾಕು ಮುಕ್ತ ಗ್ರಾಮವಾಗಿರುವುದನ್ನು ಕೇಳಿ ಆಶ್ಚರ್ಯವೆನಿಸಿತು ಎಂದರು.

ಯಾವುದೇ ದುಷ್ಟಟವನ್ನು ಕಲಿತು , ಅದರ ದಾಸರಾಗಿ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದರ ಬದಲು, ದುಶ್ಚಟದಿಂದ ಹೊರಬರಬೇಕೆಂಬ ಉತ್ತೇಜನ ಹೊಂದಿ , ವ್ಯಸನ ಮುಕ್ತರನ್ನಾಗಿಸುವುದು ಒಂದು ಕಷ್ಟದ ಕಾರ್ಯ ಆದರೆ ಕೋಡಿಬೆಂಗ್ರೆ ಗ್ರಾಮದ ಜನರು ಇದರಿಂದ ಹೊರಬಂದಿರುವುದು ಒಂದು ಉತ್ತಮ ಸಾಧನೆ ಎಂದರು.

ತಂಬಾಕು ಮುಕ್ತ ಗ್ರಾಮವೆಂದು ಕಳೆದ 2-3 ದಶಕಗಳ ಹಿಂದೆಯೇ ಕಾರ್ಯರೂಪಕ್ಕೆ ತಂದಿರುವುದಕ್ಕೆ , ಈ ಗ್ರಾಮವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಹವಾಗಿದೆ ಎಂದ ಅವರು , ಸ್ಥಳೀಯ ಗ್ರಾಮದ ಸರ್ವಾಂಗಿಣ ಅಭಿವೃಧ್ದಿ ಕಾರ್ಯಗಳಿಗೆ ಹಾಗೂ ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಸ್ಥಳೀಯ ಮುಖಂಡ ರಮೇಶ್ ಎಸ್ ತಿಂಗಳಾಯ ಪ್ರಾಸ್ತಾವಿಕವಾಗಿ ಮಾತನಾಡಿ, ಕೋಡಿಬೆಂಗ್ರೆ ಗ್ರಾಮವು 290 ಮನೆಯನ್ನು ಹೊಂದಿ 1375 ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಒಂದು ಶಾಲೆ ,6 ದೇವಸ್ಥಾನ,1 ಮಸೀದಿ,12 ದಿನಸಿ ಅಂಗಡಿಗಳನ್ನು ಒಳಗೊಂಡ ಗ್ರಾಮವಾಗಿದ್ದು, ಸ್ಥಳೀಯ ಜನರು ಒಳಿತು ಕಾರ್ಯಗಳಿಗೆ ಒಗ್ಗಟ್ಟನ್ನು ಪ್ರದರ್ಶಿಸುವುದು ಒಂದು ವಿಶೇಷ ಎಂದರು.

ಹಿಂದೆ ಮದುವೆ ಕಾರ್ಯಕ್ರಮದ ಮುನ್ನಾ ದಿನ ನಡೆಯುವ ವಿಜೃಂಭಣೆಯ ಮೆಹಂದಿ ಕಾರ್ಯಕ್ರಮದಲ್ಲಿ ಯುವಜನರು ಪಾನಮತ್ತರಾಗಿ , ಸಂಗೀತ ಕಾರ್ಯಕ್ರಮದಲ್ಲಿ ತಡರಾತ್ರಿವರೆಗೆ ನರ್ತಿಸುತ್ತಿರುವುದು ಕಂಡ ಹಿರಿಯರು , ಯುವಜನರು ದುಶ್ಚಟಕ್ಕೆ ಬಲಿಯಗಬಾರದೆಂಬ ಉದ್ದೇಶದಿಂದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮಿತಿಯ ಹಾಗೂ ದೇವರ ಆಶೀರ್ವಾದದಿಂದ ಮದ್ಯಪಾನ ಹಾಗೂ ನಶೆ ಮುಕ್ತ ಗ್ರಾಮವಾಗಿಸಬೇಕೆಂಬ ಕರಿಣ ನಿರ್ಧಾರ ಹಾಗೂ ಪರಿಶ್ರಮದಿಂದ ಪ್ರಸ್ತುತ ಗ್ರಾಮ ಇವೆರೆಡರಿಂದ ಮುಕ್ತವಾಗಿದೆ ಎಂದರು.

ಗ್ರಾಮಸ್ಥರ ಜೊತೆಗೆ ಸ್ಥಳೀಯ ವ್ಯಾಪಾರಸ್ಥರು ಸಹ ಇದಕ್ಕೆ ಕೈಜೋಡಿಸಿ ತಮ್ಮ ಅಂಗಡಿ ಮುಂಗಟ್ಟುಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನೇ ನಿಲ್ಲಿಸಿ ಈ ಆಂದೋಲನಕ್ಕೆ ಸಹಕರಿಸಿದರು. ಗ್ರಾಮದಲ್ಲಿ ಅನಧಿಕೃತ ಮದ್ಯದಂಗಡಿಗಳನ್ನು ತೆರವುಗೊಳಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿತ್ತು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆಯಿಂದ ಮನುಷ್ಯನ ದೇಹದಲ್ಲಿ ದುಷ್ಪರಿಣಾಮ ಉಂಟಾಗುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್, ಹೃದಯ ರೋಗ,ಶ್ವಾ¸ಕೋಸಕ್ಕೆ ಸಂಬAದಿಸಿದ ರೋಗಗಳು ಬರುವ ಸಾಧ್ಯತೆ ಇರುವ ಹಿನ್ನಲೆ ಇವುಗಳಿಂದ ದೂರು ಇರುವುದು ಒಳಿತು ಎಂದರು.

ಇದೇ ಸಂದರ್ಭದಲ್ಲಿ ಮದ್ಯ ಮತ್ತು ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಸಹಕರಿಸಿದ ಹಿರಿಯರು ಹಾಗೂ ಯುವಜನರನ್ನು ಸನ್ಮಾನಿಸಲಾಯಿತು. ಸ್ಥಳೀಯ ಶಾಸಕರಿಗೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಮನವಿಯನ್ನು ಸಲ್ಲಿಸಲಾಯಿತು.

ಸಭೆಯಲ್ಲಿ ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ನಾಗರತ್ನ, ಜಿಲ್ಲಾ ಆಹಾರ ಸುರಕ್ಷಿತಾ ಅಧಿಕಾರಿ ಡಾ.ಪ್ರೇಮಾನಂದ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಏಡ್ಸ್ ನಿಯಂತ್ರಣಾಧಿಕಾರಿ ಚಿದಾನಂದ ಸಂಜು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೇಶವ ಕುಂದರ್, ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಜಯ ಕುಂದರ್, ಮಣಿಪಾಲ ವಿವಿಯ ಪ್ರೊಪೆಸರ್ ಡಾ.ಮುರಳೀಧರ್ ಕುಲಕರ್ಣಿ, ಕೋಡಿ ಬೆಂಗ್ರೆ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯ ಡಾ.ಸಚ್ಚಿದಾನಂದ ಮುಖಂಡರಾದ ಬಿ.ಬಿ.ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago