ಉಡುಪಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಐಇ–೫ ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು ಮುಂಚಿತವಾಗಿ ಂಇ–೫ ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸ್ಫೋಟಕ ಕಾಯಿದೆ ಮತ್ತು ನಿಯಮ ೨೦೦೮ ರ ಶೆಡ್ಯೂಲ್-Iಗಿ ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಈಗಾಗಲೇ ಸಮಿತಿಯು ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ, ಅರ್ಜಿಗಳನ್ನು ಜಿಲ್ಲಾಧಿಕಾರಿಯವರ ಕಚೇರಿಯಿಂದ ಅಥವಾ ಆನ್ಲೈನ್ ಐSಆಂ Poಡಿಣಚಿಟ ನಲ್ಲಿ ಪಡೆದು ಅಕ್ಟೋಬರ್ ೧೦ ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ೩೦೦ ರೂ. ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ೬೦೦ ರೂ. ಪರವಾನಿಗೆ ಶುಲ್ಕವನ್ನು ಪಾವತಿಸಬೇಕು.
ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಂಇ–೫ ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ, ಪ್ರಸ್ತಾಪಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (೧೦೦ ರೂ.ಸ್ಟಾಂಪ್ ಪೇಪರ್), ಸರಕಾರ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು.
ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆ, ತಹಶೀಲ್ದಾರರ ಹಾಗೂ ಸಂಬAಧಪಟ್ಟ ಸ್ಥಳೀಯ ಸಂಸ್ಥೆಗಳಿAದ ಪಡೆದ ನಿರಾಕ್ಷೇಪಣಾ ಪತ್ರಗಳನ್ನು ಂಇ–೫ ನಮೂನೆ, ಪ್ರಸ್ತಾವಿತ ಜಮೀನಿನ ನಕ್ಷೆ, ಇತ್ತೀಚಿನ ಪಹಣಿ ಪತ್ರ ದಾಖಲೆಗಳು ಹಾಗೂ ತಾಲೂಕು ಮಟ್ಟದ ಸಮಿತಿಯಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು. ಐSಆಂ Poಡಿಣಚಿಟ ನ ನಮೂನೆಯಲ್ಲಿರುವ ಎಲ್ಲಾ ಕಲಂಗಳನ್ನು ವಿವರದೊಂದಿಗೆ ಭರ್ತಿ ಮಾಡಬೇಕು.
ತಾಲೂಕು ಮಟ್ಟದ ಸಮಿತಿಯು ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಬಹುದಾಗಿದ್ದು, ಸಂಬAಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ ದಿ ಎಕ್ಸ್ಪ್ಲೋಸಿವ್ ಆಕ್ಟ್ ೧೮೮೪ ಸೆಕ್ಷನ್ ೮೪ ಹಾಗೂ ಎಕ್ಸ್ಪ್ಲೋಸಿವ್ ರೂಲ್ಸ್ ೨೦೦೮ ಕಾಯಿದೆ/ ನಿಯಮಾವಳಿಗಳಿಗೆ ಒಳಪಟ್ಟು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…