ಉಡುಪಿ : ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ.
ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡಬೇಕು, ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಲಾಖೆಯು ಸುತ್ತೋಲೆ ಬಿಡುಗಡೆ ಮಾಡಿ ಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿ ಗಳು, ಹಾಗೂ ಪೋಷಕರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…