ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ರಾಜ್ಯ ಸರಕಾರ 228.33 ಲಕ್ಷ ರೂ. ಹಾಗೂ ಇತರ ಬಾಕಿ ಇರುವ ಸಾದಿಲ್ವಾರು ವೆಚ್ಚ 140.37 ಲಕ್ಷ ರೂ.ಸೇರಿದಂತೆ ಒಟ್ಟು 368.70 ಲಕ್ಷ ರೂ. ಭರಿಸಲು ಅನುಮತಿ ನೀಡಿ ಆದೇಶಿಸಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಖಾಸಗಿಯವರು ನಿರ್ವಹಿಸುತ್ತಿದ್ದ 200 ಹಾಸಿಗೆಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರದ ಸುಪರ್ದಿಗೆ ಪಡೆಯಲಾಗಿತ್ತು. ಸರಕಾರದ ಸುಪರ್ದಿಗೆ ಪಡೆಯುವ ಮೊದಲು ಕಾರ್ಯನಿರ್ವಹಿಸಲಾಗಿದ್ದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಾಕಿ ವೇತನ ಭತ್ಯೆ ಹಾಗೂ ಇತರ ಬಾಕಿ ಮೊತ್ತ ಭರಿಸಲು ಒಟ್ಟು 3,68,71,724ರೂ. ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ – Vishwanews24
ಈ ಮೊತ್ತವನ್ನು ತಕ್ಷಣದಲ್ಲಿ ಪಾವತಿಸಲು ಕಳೆದ ಜೂನ್ ತಿಂಗಳಲ್ಲಿ ಶಾಸಕ ಕೆ ರಘುಪತಿ ಭಟ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಲ್ಲಿ ಚರ್ಚಿಸಿ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿ ವೇತನ ಬಾಕಿ ಪಾವತಿ ಮಾಡುವುದು ಎಂದು ಷರಾ ಬರೆದು ಆರ್ಥಿಕ ಇಲಾಖೆಗೆ ಸೂಚಿಸಿದ್ದರು. ಇದೀಗ ಆರ್ಥಿಕ ಇಲಾಖೆಯ ಒಪ್ಪಿಗೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 368.70 ಲಕ್ಷ ರೂ. ಭರಿಸಲು ಅನುಮತಿ ನೀಡಿ ಈ ಆದೇಶ ಹೊರಡಿಸಿದೆ.
ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಅವರಿಗೆ ಶಾಸಕ ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…