Featured

ಉಡುಪಿ : ತಾಯಿ ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ಬಾಕಿ ವೇತನ 3.68 ಕೋಟಿ ರೂ. ಬಿಡುಗಡೆ – Vishwanews24

ಉಡುಪಿ : ತಾಯಿ ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ಬಾಕಿ ವೇತನ 3.68 ಕೋಟಿ ರೂ. ಬಿಡುಗಡೆ

ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ರಾಜ್ಯ ಸರಕಾರ 228.33 ಲಕ್ಷ ರೂ. ಹಾಗೂ ಇತರ ಬಾಕಿ ಇರುವ ಸಾದಿಲ್ವಾರು ವೆಚ್ಚ 140.37 ಲಕ್ಷ ರೂ.ಸೇರಿದಂತೆ ಒಟ್ಟು 368.70 ಲಕ್ಷ ರೂ. ಭರಿಸಲು ಅನುಮತಿ ನೀಡಿ ಆದೇಶಿಸಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಖಾಸಗಿಯವರು ನಿರ್ವಹಿಸುತ್ತಿದ್ದ 200 ಹಾಸಿಗೆಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರದ ಸುಪರ್ದಿಗೆ ಪಡೆಯಲಾಗಿತ್ತು. ಸರಕಾರದ ಸುಪರ್ದಿಗೆ ಪಡೆಯುವ ಮೊದಲು ಕಾರ್ಯನಿರ್ವಹಿಸಲಾಗಿದ್ದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಾಕಿ ವೇತನ ಭತ್ಯೆ ಹಾಗೂ ಇತರ ಬಾಕಿ ಮೊತ್ತ ಭರಿಸಲು ಒಟ್ಟು 3,68,71,724ರೂ. ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ – Vishwanews24

ಈ ಮೊತ್ತವನ್ನು ತಕ್ಷಣದಲ್ಲಿ ಪಾವತಿಸಲು ಕಳೆದ ಜೂನ್ ತಿಂಗಳಲ್ಲಿ ಶಾಸಕ ಕೆ ರಘುಪತಿ ಭಟ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಲ್ಲಿ ಚರ್ಚಿಸಿ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿ ವೇತನ ಬಾಕಿ ಪಾವತಿ ಮಾಡುವುದು ಎಂದು ಷರಾ ಬರೆದು ಆರ್ಥಿಕ ಇಲಾಖೆಗೆ ಸೂಚಿಸಿದ್ದರು. ಇದೀಗ ಆರ್ಥಿಕ ಇಲಾಖೆಯ ಒಪ್ಪಿಗೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 368.70 ಲಕ್ಷ ರೂ. ಭರಿಸಲು ಅನುಮತಿ ನೀಡಿ ಈ ಆದೇಶ ಹೊರಡಿಸಿದೆ.

ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಅವರಿಗೆ ಶಾಸಕ ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago