ಉಡುಪಿ: ಜಿಲ್ಲೆಯ ನೇಜಾರುವಿನಲ್ಲಿ ನಡೆದ ಅಮಾನವೀಯ ಕೊಲೆ ಮನುಷ್ಯತ್ವವನ್ನು ಮರೆ ಮಾಚುವಂತಹ ಘಟನೆಯಾಗಿದೆ ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಹೇಳಿದ್ದಾರೆ.
ದೇಶದ ಜನ ದೀಪಾವಳಿ ಸಂಭ್ರಮಾಚರಣೆಯ ಸಂದರ್ಭದಲ್ಲಿದ್ದಾಗಲೇ ಬೆಳ್ಳಂಬೆಳಗ್ಗೆ ಒಂದೇ ಮನೆಯ ತಾಯಿ ಹಾಗೂ ಮೂರು ಮಕ್ಕಳನ್ನು ಕೊಂದು ಹಾಕಿರುವುದು ದುಃಖಕರ ವಿಚಾರವಾಗಿದ್ದು ಈ ಘಟನೆಯಿಂದ ಜಿಲ್ಲೆಯ ಜನತೆ ಭಯಭೀತರಾಗುವಂತೆ ಮಾಡಿದೆ. ಈ ಘಟನೆಯಿಂದಾಗಿ ಮನುಷ್ಯನ ಜೀವಕ್ಕೆ ಬೆಲೆ ಇಲ್ಲದ ರೀತಿಯಾಗಿದ್ದು, ಜನತೆ ಭಯದ ವಾತಾವರದಲ್ಲಿ ಬದುಕುವಂತಾಗಿದೆ.
ಜಿಲ್ಲೆಯಲ್ಲಿ ನಡೆದ ಈ ಕೂಲೆ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದು, ತಾಯಿ ಮತ್ತು ಮಕ್ಕಳನ್ನು ಕೊಂದು ಒಡಿಹೋಗಿರುವ ಕೊಲೆಗಾರನನ್ನು ಆದಷ್ಟು ಬೇಗ ಬಂಧಿಸಿ ನ್ಯಾಯಕೊಡಿಸುವ ಕೆಲಸ ನಡೆಯಬೇಕಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಈ ಘಟನೆಯನ್ನು ವಿಶೇಷವಾಗಿ ಪರಿಗಣಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ.
ಘಟನೆ ನಡೆದು ಎರಡು ದಿನ ಕಳೆದರೂ ಆರೋಪಿ ಪತ್ತೆಯಾಗದಿರುವುದರಿಂದ ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೂಲೆಗಾರನನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯ ಒದಗಿಸುವುದರೊಂದಿಗೆ ಮುಂದೆ ಈ ರೀತಿಯ ಘಟನೆಯ ನಡೆಯದಂತೆ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು ಎಂದು ಅವರು ಸರಕಾರಕ್ಕೆ ಆಗ್ರಹಿಸಿದ್ದಾರೆ.
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…