Featured

ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮಸ್ಯೆಯನ್ನು ರಘುಪತಿ ಭಟ್ ಅವರೇ ಬಗೆಹರಿಸಲಿ: ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮಸ್ಯೆಯನ್ನು ರಘುಪತಿ ಭಟ್ ಅವರೇ ಬಗೆಹರಿಸಲಿ: ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಉದ್ಯಮಿ ಡಾ. ಬಿ. ಆರ್. ಶೆಟ್ಟಿಯವರು ಉಡುಪಿಯಲ್ಲಿ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡು ಆಸ್ಪತ್ರೆ ನಿರ್ಮಿಸಿ ನಿರ್ವಹಿಸುತ್ತಿದ್ದರು.

ಈ ಆಸ್ಪತ್ರೆ ನಿರ್ಮಾಣಗೊಂಡ ಬಳಿಕ ಹತ್ತು ಸಾವಿರಕ್ಕೂ ಹೆಚ್ಚು ಗರ್ಬಿಣಿಯರು ಸಂತೋಷದಿಂದ ಈ ಆಸ್ಪತ್ರೆಯಲ್ಲಿ ಮಕ್ಕಳನ್ನ ಹೆತ್ತಿದ್ದಾರೆ, ಆಸ್ಪತ್ರೆಯವರೇ ಆಹಾರ ಮತ್ತು ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

400 ಬೆಡ್ ಗಳ ಆಸ್ಪತ್ರೆಯನ್ನು ಕಟ್ಟಿಸಲು ಸರಕಾರಿ ಜಾಗವನ್ನು ಹಲವು ವರ್ಷಗಳಿಗೆ ಗುತ್ತಿಗೆಯಾಧಾರದಲ್ಲಿ ನೀಡಬೇಕು, ಅಲ್ಲಿಂದ ಬರುವ ಆದಾಯದಿಂದ 200 ಬೆಡ್ ಗಳುಳ್ಳ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯನ್ನು ಮುಂದುವರಿಸುತ್ತೇವೆ ಎಂದು ಸರಕಾರದೊಂದಿಗೆ ಎಂ. ಓ. ಯು ಮಾಡಿಸಿಕೊಂಡಿತ್ತು.

ಹಿಂದಿನ ಸರ್ಕಾರದೊಂದಿಗೆ ಮಾಡಿಕೊಂಡಿರುವ ಕಾನೂನಾತ್ಮಕ ಒಪ್ಪಂದದಂತೆ ಎರಡು ಆಸ್ಪತ್ರೆ ಗಳ ಈ ಯೋಜನೆಯನ್ನು ಡಾ. ಬಿ.ಆರ್ ಶೆಟ್ಟಿಯವರು ಸ್ವಂತ ಲಾಭಕ್ಕಾಗಿ ಮಾಡದೆ 400 ಬೆಡ್ ಗಳ ಸುಸಜ್ಜಿತ ಆಸ್ಪತ್ರೆಯಿಂದ ಬಂದ ಲಾಭಾಂಶವನ್ನು ಸಂಪೂರ್ಣವಾಗಿ ಎರಡೂ ಅಸ್ಪತ್ರೆಗಳ ನಿರ್ವಹಣೆ ಮತ್ತು ಅಭಿವೃದ್ದಿಗಾಗಿ ಬಳಸಿಕೊಳ್ಳುವುದಾಗಿ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು.

ಸರಕಾರ ಬದಲಾದ ಮೇಲೆ ಹಾಲಿ ಶಾಸಕ ರಘುಪತಿ ಭಟ್ ರವರು 400 ಬೆಡ್ ಗಳ ಆಸ್ಪತ್ರೆಯನ್ನು ಕಟ್ಟಿಸಲು ವಿರೋಧ ತೋರಿದ ಹಿನ್ನಲೆಯಲ್ಲಿ ಮತ್ತು ಸರಕಾರಿ ಅನುದಾನ ಮತ್ತು ಯೋಜನೆಗಳ ಬಿಲ್ ಬಾಕಿ ಪಾವತಿಯಾಗದೇ ಇರುವುದರಿಂದಾಗಿ ಬಿ. ಆರ್ ಶೆಟ್ಟಿ ಸಂಸ್ಥೆಯು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರಕ್ಕೆ ಸಂಪೂರ್ಣವಾಗಿ ಹಸ್ತಾಂತರಿಸಿ ಅದರ ನಿರ್ವಹಣೆಯ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಸರಕಾರಕ್ಕೆ ಪತ್ರ ಬರೆದು ನೋಟಿಸ್ ನೀಡಿದೆ.

400 ಬೆಡ್ ಗಳ ಆಸ್ಪತ್ರೆ ನಿರ್ಮಾಣಕ್ಕೆ ಹಿಂದಿನ ಸರಕಾರ ಅನುಮತಿ ನೀಡಿದ್ದರೂ, ಸರಕಾರ ಬದಲಾದ ಮೇಲೆ ಶಾಸಕ ರಘುಪತಿ ಭಟ್ ರವರು ಈ ಆಸ್ಪತ್ರೆ ನಿರ್ಮಾಣಕ್ಕೆ ತಡೆಯೊಡ್ಡುತ್ತಾ ಬಂದಿರುವುದರಿಂದ ವ್ಯವಸ್ಥಿತವಾಗಿ ನಡೆಯುತ್ತಿದ್ದ ಸುಸಜ್ಜಿತ ಆಸ್ಪತ್ರೆ ಇಂದು ಅವ್ಯವಸ್ಥೆಯತ್ತ ಮುಖಮಾಡುತ್ತಿದೆ.

ಶಾಸಕ ರಘುಪತಿ ಭಟ್ ರವರಿಂದ ಪ್ರಾರಂಭವಾದ ಈ ಸಮಸ್ಯೆಯನ್ನು ಅವರೇ ಪರಿಹರಿಸಲಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಗ್ರಹಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

20 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

21 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

21 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

22 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

22 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago