Featured

ಉಡುಪಿ : ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ – Vishwanews24

ಉಡುಪಿ : ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ – Vishwanews24

ಉಡುಪಿ : ಜಿಲ್ಲೆಯ ಯುವಕರ ಪ್ರತಿಭೆಯನ್ನು ತೊರ್ಪಡಿಸಲು, ದೇಶಭಕ್ತಿ ಮತ್ತು ರಾಷ್ಟç ನಿರ್ಮಾಣದಲ್ಲಿ ಯುವಜನರು ಕುರಿತ ಭಾಷಣಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ನೆಹರು ಯುವ ಕೇಂದ್ರಗಳಿಗೆ ವಹಿಸಲಾಗಿರುತ್ತದೆ.

ಬಹುಮಾನಗಳ ವಿವರ : ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ
ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನವಾಗಿ
2,000 ರೂ., ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ
ಬಹುಮಾನವಾಗಿ 25,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ. ಮತ್ತು ರಾಷ್ಟç
ಮಟ್ಟದ ವಿಜೇತರುಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ., ದ್ವಿತೀಯ ಬಹುಮಾನವಾಗಿ 1 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ
50,000 ರೂ. ನೀಡಲಾಗುವುದು.

ಭಾಷಣದ ವಿಷಯ: “Patriotism & Nation Building” with the Theme Sabka Saath, Sabka Vikas, Sabka Vishwas (Together we Grow, We Prosper, Together we Build a Strong and Inclusive India).). ಭಾಷಣ ಸ್ಪರ್ಧೆಗೆ 9-10 ನಿಮಿಷಗಳ ಕಾಲಾವಕಾಶ ನಿಗದಿಪಡಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಭಾಷಣ ಮಾಡಲು ಅವಕಾಶ ಇರುತ್ತದೆ.

ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆಯು ನಡೆಯುವ ಸ್ಥಳ ಹಾಗೂ ಸಂಪರ್ಕಿಸ ಬೇಕಾದ ವ್ಯಕ್ತಿಗಳ ವಿವರ :– ಕುಂದಾಪುರ, ಬೈಂದೂರು
ತಾಲೂಕುಗಳಿಗೆ ಸಂಬ0ಧಿಸಿದ0ತೆ ನವೆಂಬರ್ 25 ರಂದು ಬೆಳಗ್ಗೆ 10.30 ಕ್ಕೆ ಕುಂದಾಪುರ ಭಂಡಾರ್‌ರ‍್ಸ್ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು,
ಎನ್.ಎಸ್.ಎಸ್ ಅಧಿಕಾರಿ ಅರುಣ್ ಕುಮಾರ್ ಮೊ.ನಂ. 9480396456 / 9972404202, ಉಡುಪಿ, ಕಾಪು ಮತ್ತು ಬ್ರಹ್ಮಾವರ
ತಾಲೂಕುಗಳಿಗೆ ಸಂಬ0ಧಿಸಿದ0ತೆ ನವೆಂಬರ್ 26 ರಂದು ಬೆಳಗ್ಗೆ 11 ಗಂಟೆಗೆ ನಗರದ ಎಂ.ಜಿ.ಎA ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು,
ಎನ್.ಎಸ್.ಎಸ್ ಅಧಿಕಾರಿ ಸುಚಿತ್ ಕೋಟ್ಯಾನ್ ಮೊ.ನಂ: 8884323443 / 9739430331 ಹಾಗೂ ಕಾರ್ಕಳ, ಹೆಬ್ರಿ ತಾಲೂಕುಗಳಿಗೆ
ಸಂಬ0ಧಿಸಿದ0ತೆ ನವೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್.ಎಸ್.ಎಸ್
ಅಧಿಕಾರಿ ಸುಚಿತ್ರಾ ಮೊ.ನಂ: 8197488357 ಅನ್ನು ಸಂಪರ್ಕಿಸಬಹುದಾಗಿದೆ.

ಭಾಷಣ ಸ್ಪರ್ಧೆಯಲ್ಲಿ 18 ರಿಂದ 29 ವರ್ಷದೊಳಗಿನ ಯುವಜನರು ಭಾಗವಹಿಸಬಹುದಾಗಿದ್ದು, ಕಡ್ಡಾಯವಾಗಿ ಉಡುಪಿ ಜಿಲ್ಲೆಯ
ನಿವಾಸಿಗಳಾಗಿರಬೇಕು. ಸ್ಪರ್ಧಾಳುಗಳು ತಮ್ಮ 01 ಪಾಸ್ ಪೋರ್ಟ ಸೈಜ್ ಪೋಟೊ, ಆಧಾರ್ ಕಾರ್ಡ್ (ಕಡ್ಡಾಯವಾಗಿ) ಪ್ರತಿ, ಪ್ಯಾನ್ ಕಾರ್ಡ್/
ಶಾಲಾ ಕಾಲೇಜಿನಿಂದ ಅಥವಾ ಆಫೀಸ್/ಸಂಸ್ಥೆಗಳಿ0ದ ಜಾರಿಯಾದ ಅಧಿಕೃತ ಫೋಟೊ ಇರುವ ಗುರುತಿನ ಚೀಟಿಯನ್ನು, ವಯೋಮಿತಿಯ
ತಪಾಸಣೆಗಾಗಿ ಅಗತ್ಯವಾಗಿ ತರಬೇಕು

ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರದ ದೂರವಾಣಿ ಸಂಖ್ಯೆ: 0820-2574992 ಅಥವಾ ಇ-ಮೇಲ್
dyc.udupi@gmail.com ಅನ್ನು ಸಂಪರ್ಕಿಸುವ0ತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ವಿಲ್ಲ್ಫ್ರೆಡ್ ಡಿ
ಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

12 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

12 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

14 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

14 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

14 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

14 hours ago