ಉಡುಪಿ

ಉಡುಪಿ :ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ  ಕೋರಿ ರಘುಪತಿ ಭಟ್‌ ಮನವಿಗೆ ಸಿಎಂ ಸ್ಪಂದನೆ -Vishwanews24

ಉಡುಪಿ :ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ  ಕೋರಿ ರಘುಪತಿ ಭಟ್‌ ಮನವಿಗೆ ಸಿಎಂ ಸ್ಪಂದನೆ -Vishwanews24

ಉಡುಪಿ : ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಕೋರಿ ಶಾಸಕ ರಘುಪತಿ ಭಟ್‌ ಅವರು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ಸ್ಪಂಧನೆ ನೀಡಿದ್ದು ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಶಾಸಕ ರಘುಪತಿ ಭಟ್‌ ಅವರು, ”ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ನಾನು ಈ ಹಿಂದೆಯೇ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿರುವಂತೆ ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ” ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಜನರು ತಮ್ಮದೇ ಆದ ಸಾಮಾಜಿಕ ಹಾಗೂ ಧಾರ್ಮಿಕ ಆಚರಣೆ ಮತ್ತು ಸಂಸ್ಕೃತಿಯನ್ನು ರೂಡಿಸಿಕೊಂಡು ಬಂದಿದ್ದು ಲಾಕ್‌ಡೌನ್‌ ಕಾರಣದಿಂದ ಈ ಆಚರಣೆಗೆ ಧಕ್ಕೆ ಉಂಟಾಗಿದೆ. ಧಾರ್ಮಿಕ ಸೇವೆಗಳಿಗೆ ನಿಷೇಧ ಹೇರಿದ್ದರಿಂದ ತುಳು ನಾಡ ದೈವರಾಧಕರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟಾಗಿದ್ದಲ್ಲದೇ ದೈವ ಪರಿಚಾರಕರ ಅಂದರೆ ನಾಗಸ್ವರ ವಾದಕರು, ಮಡಿವಾಳ, ದರ್ಶನ ಪಾತ್ರಿ, ಮಧ್ಯಸ್ಥರು, ಗರೋಡಿ ವರ್ಗದವವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿ ಸುಮಾರು 600 ಜನರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ> ಈ ಹಿನ್ನೆಲೆ ಈ ಆಚರಣೆಗಳಿಗೆ ಅವಕಾಶ ನೀಡಬೇಕು ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಿಸಲು 10 ಸಾವಿರ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ರಘುಪತಿ ಭಟ್‌ ಮನವಿ ಸಲ್ಲಿಸಿದ್ದರು.

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago