Featured

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ

ಉಡುಪಿ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಉದಯ್ ಶೆಟ್ಟಿ ಅವರು, ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ವತಿಯಿಂದ “ತುಳು ಅಭಿವೃದ್ಧಿ ಪ್ರಾಧಿಕಾರ” ವನ್ನು ಶೀಘ್ರವಾಗಿ ಸ್ಥಾಪಿಸಬೇಕೆಂದು ಮುಖ್ಯಮಂತ್ರಿಗಳಿಗೆಮನವಿ ಸಲ್ಲಿಸಿದ್ದೇನೆ. ತುಳು ಭಾಷೆಯು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃಭಾಷೆಯಾಗಿದೆ. ತುಳು ಭಾಷೆಯು ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗವಾಗಿದೆ. ಜಾಗತೀಕರಣದ ಪರಿಣಾಮವಾಗಿ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ ಎಂದರು.

ಈಗಾಗಲೇ ಯುನೆಸ್ಕೋ (UNESCO) ಸಹ ತುಳು ಭಾಷೆಯನ್ನು ಸಂರಕ್ಷಿಸಬೇಕಾದ ಭಾಷೆಗಳ ಪೈಕಿ ಪರಿಗಣಿಸಿರುವ ಹಿನ್ನೆಲೆಯಲ್ಲಿ, ತುಳು ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ವಿಶೇಷ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಆದ್ದರಿಂದ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ತುಳು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ, ತುಳು ಸಾಹಿತ್ಯ, ಸಂಶೋಧನೆ ಹಾಗೂ ಪ್ರಕಟಣೆಗಳಿಗೆ ಉತ್ತೇಜನ, ಶಾಲೆ ಮತ್ತು ಕಾಲೇಜುಗಳಲ್ಲಿ ತುಳು ಅಧ್ಯಯನಕ್ಕೆ ಹೆಚ್ಚಿನ ಪ್ರೋತ್ಸಾಹ, ತುಳು ಜಾನಪದ ಕಲೆ, ಯಕ್ಷಗಾನ, ಭೂತಾರಾಧನೆ ಹಾಗೂ ಇತರ ಸಾಂಸ್ಕೃತಿಕ ಪರಂಪರೆಗಳ ಸಂರಕ್ಷಣೆ, ತುಳು ಭಾಷೆಗೆ ಸಂವಿಧಾನಿಕ ಹಾಗೂ ಶೈಕ್ಷಣಿಕ ಮಾನ್ಯತೆ ದೊರಕುವಂತೆ ಕ್ರಮ ಕೈಗೊಳ್ಳುವುದು, ತುಳುನಾಡಿನ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನಕ್ಕೆ ಬೇಡಿಕೆ
ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ತುಳು ಭವನ ನಿರ್ಮಾಣ ಮಾಡುವ ಕುರಿತು ಮನವಿ ಮಾಡಿಕೊಂಡಿದ್ದು, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸುಸಜ್ಜಿತ ತುಳು ಭವನ ನಿರ್ಮಾಣ ಅಗತ್ಯವಾಗಿದೆ. ಕಾರ್ಕಳವು ತುಳುನಾಡಿನ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಇಲ್ಲಿ ತುಳು ಭಾಷೆ, ಯಕ್ಷಗಾನ, ಭೂತಾರಾಧನೆ, ನಾಗಾರಾಧನೆ ಹಾಗೂ ಇತರ ಜನಪದ ಕಲೆಗಳು ಇಂದಿಗೂ ಜೀವಂತವಾಗಿವೆ. ತುಳು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ, ಅಧ್ಯಯನ ಮತ್ತು ಪ್ರಚಾರಕ್ಕಾಗಿ ಕಾರ್ಕಳದಲ್ಲಿ ತುಳು ಭವನದ ಅಗತ್ಯವಿದೆ.ಪ್ರಸ್ತಾವಿತ ತುಳು ಭವನದಲ್ಲಿ ಗ್ರಂಥಾಲಯ, ಸಂಶೋಧನಾ ಕೇಂದ್ರ, ಸಭಾಂಗಣ, ವಸ್ತುಸಂಗ್ರಹಾಲಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬಹುದಾಗಿದೆ. ಇದರಿಂದ ತುಳು ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಆದ್ದರಿಂದ, ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ಸರ್ಕಾರದ ವತಿಯಿಂದ ಸೂಕ್ತ ಜಾಗವನ್ನು ಗುರುತಿಸಿ, ಅಗತ್ಯ ಅನುದಾನವನ್ನು ಮಂಜೂರು ಮಾಡಿ ಶೀಘ್ರದಲ್ಲೇ ತುಳು ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ಉದಯ್ ಶೆಟ್ಟಿ ಮುನಿಯಾಲ್ ಅವರು ನೂತನ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago