ಉಡುಪಿ : ಇನ್ನಾದರೂ ರಾಜ್ಯದಲ್ಲಿ ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಗೆ ಮಾನ್ಯತೆ ಸಿಗಬಹುದು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಎಂಜಿಎಂ ಕಾಲೇಜಿನ ಮದ್ದಣ ಮಂಟಪದಲ್ಲಿ ನಡೆದ ತುಳುಕೂಟ ಉಡುಪಿ ಇದರ 21ನೇ ವರ್ಷದ ಕೆಮ್ತೂರು ದೊಡ್ಡಣ ಶೆಟ್ರೆನ ನೆಂಪುದ ತುಳು ನಾಟಕ ಪರ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಳು ಭಾಷೆಗೆ ಇತರ ನಾಲ್ಕು ಭಾಷೆಗಳಿಗೆ ಸಿಕ್ಕಿರುವ ಮಾನ್ಯತೆ ಸಿಕ್ಕಿಲ್ಲ, ಪ್ರಸ್ತುತ ರಾಜ್ಯದ ಸಂಸ್ಕೃತಿ ಸಚಿವರು ತುಳುವರಾದ್ದರಿಂದ ಭಾಷೆಗೆ ನಮ್ಮ ರಾಜ್ಯದಲ್ಲಿಯಾದರೂ ಮಾನ್ಯತೆ ಸಿಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾಗೂ ಜನರನ್ನು ಸೇರಿಸುವುದಕ್ಕೆ ನಾಟಕಗಳಲ್ಲಿ ಹಾಸ್ಯ ಬೇಕಾಗಬಹುದು, ಆದರೇ ಗುಣಾತ್ಮಕ ನಾಟಕಗಳಿಂದಷ್ಟೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ತುಳುಕೂಟ ಈ ನಿಟ್ಟಿನಲ್ಲಿ ಶ್ಲಾಘನೀಯ ಸಾಧನೆ ಮಾಡುತ್ತಿದೆ ಎಂದವರು ತುಳುಕೂಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಯಶಪಾಲ್ ಸುವರ್ಣ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ, ಕೆಮ್ತೂರು ಕುಟುಂಬದ ವಿಜಯ ಕುಮಾರ್ ಶೆಟ್ಟಿ, ತುಳು ಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಉಪಾಧ್ಯಕ್ಷ ಸದಾಶಿವ ಭಟ್, ಕೋಶಾಧಿಕಾರಿ ಚೈತನ್ಯ ಎಂ.ಜಿ.,ಸಮಾಜಸೇವಕ ವಿಶ್ವನಾಥ ಶೆಣೈ, ಕೂಟದ ಉಪಾಧ್ಯಕ್ಷ ದಿವಾಕರ ಸನಿಲ್, ನಾಟಕ ಸ್ಪರ್ಧೆಯ ಸಂಚಾಲಕ ಬಿ. ಪ್ರಭಾಕರ ಭಂಡಾರಿ, ಪ್ರಕಾಶ್ ಸುವರ್ಣ ಕಟಪಾಡಿ ಅವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…