ಉಡುಪಿ : ಇನ್ನಾದರೂ ರಾಜ್ಯದಲ್ಲಿ ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಗೆ ಮಾನ್ಯತೆ ಸಿಗಬಹುದು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಎಂಜಿಎಂ ಕಾಲೇಜಿನ ಮದ್ದಣ ಮಂಟಪದಲ್ಲಿ ನಡೆದ ತುಳುಕೂಟ ಉಡುಪಿ ಇದರ 21ನೇ ವರ್ಷದ ಕೆಮ್ತೂರು ದೊಡ್ಡಣ ಶೆಟ್ರೆನ ನೆಂಪುದ ತುಳು ನಾಟಕ ಪರ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಳು ಭಾಷೆಗೆ ಇತರ ನಾಲ್ಕು ಭಾಷೆಗಳಿಗೆ ಸಿಕ್ಕಿರುವ ಮಾನ್ಯತೆ ಸಿಕ್ಕಿಲ್ಲ, ಪ್ರಸ್ತುತ ರಾಜ್ಯದ ಸಂಸ್ಕೃತಿ ಸಚಿವರು ತುಳುವರಾದ್ದರಿಂದ ಭಾಷೆಗೆ ನಮ್ಮ ರಾಜ್ಯದಲ್ಲಿಯಾದರೂ ಮಾನ್ಯತೆ ಸಿಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾಗೂ ಜನರನ್ನು ಸೇರಿಸುವುದಕ್ಕೆ ನಾಟಕಗಳಲ್ಲಿ ಹಾಸ್ಯ ಬೇಕಾಗಬಹುದು, ಆದರೇ ಗುಣಾತ್ಮಕ ನಾಟಕಗಳಿಂದಷ್ಟೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ತುಳುಕೂಟ ಈ ನಿಟ್ಟಿನಲ್ಲಿ ಶ್ಲಾಘನೀಯ ಸಾಧನೆ ಮಾಡುತ್ತಿದೆ ಎಂದವರು ತುಳುಕೂಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಯಶಪಾಲ್ ಸುವರ್ಣ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ, ಕೆಮ್ತೂರು ಕುಟುಂಬದ ವಿಜಯ ಕುಮಾರ್ ಶೆಟ್ಟಿ, ತುಳು ಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಉಪಾಧ್ಯಕ್ಷ ಸದಾಶಿವ ಭಟ್, ಕೋಶಾಧಿಕಾರಿ ಚೈತನ್ಯ ಎಂ.ಜಿ.,ಸಮಾಜಸೇವಕ ವಿಶ್ವನಾಥ ಶೆಣೈ, ಕೂಟದ ಉಪಾಧ್ಯಕ್ಷ ದಿವಾಕರ ಸನಿಲ್, ನಾಟಕ ಸ್ಪರ್ಧೆಯ ಸಂಚಾಲಕ ಬಿ. ಪ್ರಭಾಕರ ಭಂಡಾರಿ, ಪ್ರಕಾಶ್ ಸುವರ್ಣ ಕಟಪಾಡಿ ಅವರು ಉಪಸ್ಥಿತರಿದ್ದರು.
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…