ಉಡುಪಿ

ಉಡುಪಿ : ತುಳು ಲಿಪಿ ಮಂದಾರ” ಬಿಡುಗಡೆ -Vishwanews24

ಉಡುಪಿ : ತುಳು ಲಿಪಿ ಮಂದಾರ” ಬಿಡುಗಡೆ -Vishwanews24

ತುಳು ಭಾಷೆ / ತುಳು ಲಿಪಿ ಪುರಾತನ ಕಾಲಘಟ್ಟದಲ್ಲಿ ಉಪಯೋಗ ಆಗುತ್ತಿದ್ದು ದಕ್ಕೆ ಪುರಾವೆ ಗಳಿವೆ – ತುಳು ಲಿಪಿ ಮಂದಾರ ಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್.

ತಾಳೆಗರಿ ಉಪಯೋಗಿಸುತ್ತಿದ್ದ ಕಾಲಘಟ್ಟದಲ್ಲಿ ತುಳು ಲಿಪಿ ಬಳಕೆಯಾಗುತ್ತಿತ್ತು. ಪುರಾತನವಾದ ಐತಿಹಾಸಿಕ ಹಿನ್ನೆಲೆಯಿರುವ ತುಳು ಭಾಷೆ, ತುಳು ಲಿಪಿ ಮಧ್ವಾಚಾರ್ಯರ ಕಾಲಘಟ್ಟ ದಲ್ಲಿಯೂ ಬಳಕೆ ಮಾಡುತ್ತಿದ್ದರು ಎಂಬುದಕ್ಕೆ ಅಷ್ಠಮಠಗಳಲ್ಲಿ ಪುರಾವೆಗಳಿವೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಸೋಮವಾರದಂದು ಆಯೋಜಿಸಲಾದ “ತುಳು ಲಿಪಿ ಮಂದಾರ” ಬಿಡುಗಡೆ ಕಾರ್ಯಕ್ರಮದಲ್ಲಿ “ತುಳು ಲಿಪಿ ಮಂದಾರ”ವನ್ನು ಬಿಡುಗಡೆಗೊಳಿಸಿ ಮಾತನಾಡಿ ದರು. ಪ್ರಾಂತ್ಯಗಳು ಬದಲಾದಂತೆ ಆಡಳಿತ ವ್ಯವಸ್ಥೆಗಳಿಂದಾಗಿ ತುಳು ಲಿಪಿ ಜನಮಾನಸ ದಿಂದ ದೂರವಾಗಿದೆ. ಪ್ರಸಕ್ತ ದಿನಗಳಲ್ಲಿ ತುಳು ಭಾಷೆ ತುಳು ಲಿಪಿಯ ಬಗ್ಗೆ ಯುವ ಸಮು ದಾಯ ಮಾಡುತ್ತಿರುವ ಕೆಲಸ ಶ್ಲಾಘನೀಯ ವಾಗಿದೆ.

ವಿಧಾನ ಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತ ನಾಡಲು ಅವಕಾಶ ಕಲ್ಪಿಸಲು ಮನವಿ ಮಾಡ ಲಾಗಿತ್ತು. ಆದರೆ ಸದನದಲ್ಲಿ ದಾಖಲಾಗುವ ಮಾಹಿತಿಗಳನ್ನು ದಾಖಲು ಮಾಡುವವರಿಗೆ ತುಳು ಭಾಷೆಯ ಅರಿವಿನ ಕೊರತೆಯಿರುವು ದರಿಂದ ಮುಂದಿನ ದಿನ ಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ಭರವಸೆಯನ್ನು ಸಭಾಧ್ಯಕ್ಷರು ನೀಡಿರುತ್ತಾರೆ ಎಂದು ಹೇಳಿದ ಅವರು ತುಳು ಲಿಪಿ, ಭಾಷೆ ಬಗ್ಗೆ ಜೈ ತುಳುನಾಡು ಸಂಘ ಟನೆಯ ಈ ಪ್ರಯತ್ನ ಉತ್ತಮ ಬೆಳವಣಿಗೆ. ಜನಮಾನಸದಲ್ಲಿ ತುಳು ಲಿಪಿ ಮೂಡಿ ಬಂದು ಎಲ್ಲರೂ ಬಳಸಿಕೊಳ್ಳುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ತುಳು ಅಕಾಡೆಮಿಯ ಸದಸ್ಯ ರಾದ ಡಾll ಆಕಾಶ್ ರಾಜ್ ಜೈನ್, ತಾರಾ ಆಚಾರ್ಯ, ಜೈ ತುಳುನಾಡು ಸಂಘಟನೆಯ ಅಧ್ಯಕ್ಷರಾದ ಸುದರ್ಶನ್ ಸೂರತ್ಕಲ್, ಸದಸ್ಯ ರಾದ ಪ್ರಹ್ಲಾದ್ ಪಿ. ತಂತ್ರಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

15 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

17 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

17 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

17 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

17 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

18 hours ago