ನವೀನ್ಚಂದ್ರ ಜೋಗಿ
ಸುಳ್ಯ: ಇಲ್ಲಿ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಗುಪ್ತವಾರ್ತೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಇವರು 3 ವರ್ಷಗಳ ಹಿಂದೆ ಸುಳ್ಯ ಪೊಲೀಸ್ ವರ್ಗಾವಣೆಗೊಂಡು ಆಗಮಿಸಿದ್ದರು. ಸುಳ್ಯದಲ್ಲಿ ಹಲವಾರು ಪ್ರಕರಣಗಳನ್ನು ಬೇದಿಸಿದ್ದರು. ಉಡುಪಿ -ಕಾಪು ಮೂಲದವರಾದ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದಷ್ಟೇ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾಯಿಸಲಾಗಿದೆ.
ರಾಜೇಂದ್ರ ನಾಯ್ಕ
ಮಲ್ಪೆ: ರಾಜೇಂದ್ರ ನಾಯ್ಕ ಎಂ.ಎನ್. ಹೆಜಮಾಡಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಉಪ ನಿರೀಕ್ಷಕರು. 12 ವರ್ಷಗಳ ಹಿಂದೆ ಪೊಲೀಸ್ ಇಲಾಖೆಗೆ ಸೇರಿದ ಅವರು ಹೊಸನಗರ ಠಾಣೆಯಿಂದ 6 ತಿಂಗಳ ಹಿಂದೆ ಹೆಜಮಾಡಿಗೆ ವರ್ಗಾವಣೆಗೊಂಡಿದ್ದರು. ಇವರು ಮೂಲತಃ ಶಿವಮೊಗ್ಗ ಜಿಲ್ಲೆಯ ಮಂಡಿಕೊಪ್ಪದವರು.
ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿರುವ ಸಂತೋಷ್ ಕುಮಾರ್ ಕೆ. ಮತ್ತು ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಡ್ಕಾನ್ಸ್ಟೆಬಲ್ ಆಗಿರುವ ಮಣಿಕಂಠ ಅವರು 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಸಂತೋಷ್ ಕುಮಾರ್ ಕೆ.
ಬಜಾಲ್ ಪಳ್ಳಕೆರೆ ನಿವಾಸಿ ಸಂತೋಷ್ 1993ರಲ್ಲಿ ಸೇವೆಗೆ ಸೇರ್ಪಡೆಗೊಂಡು ಹಿಂದೆ ಕುಂದಾಪುರ, ಬರ್ಕೆ, ಪುತ್ತೂರು, ಬರ್ಕೆ, ಪಾಂಡೇಶ್ವರ, ಕದ್ರಿಯಲ್ಲಿ ಸೇವೆ ಸಲ್ಲಿಸಿದ್ದರು. ಡಿಸಿಐಬಿಯಲ್ಲಿ ಸೇವೆ ಸಲ್ಲಿಸಿದ್ದ ಸಂದರ್ಭದಲ್ಲಿ ಹಲವು ಬಾರಿ ಪುರಸ್ಕಾರ ಪಡೆದುಕೊಂಡಿದ್ದರು.
ಮಣಿಕಂಠ
ಮಣಿಕಂಠ ಮಂಗಳೂರಿನ ಮಂದಾರಬೈಲು ನಿವಾಸಿ. 2000ರಲ್ಲಿ ಸೇವೆಗೆ ಸೇರ್ಪಡೆಗೊಂಡು ಪುತ್ತೂರು ಗ್ರಾಮಾಂತರ, ಬಂದರು, ಪಾಂಡೇಶ್ವರ, ಉರ್ವ ಠಾಣೆ, ಸಂಚಾರ ಪಶ್ಚಿಮ, ಬರ್ಕೆ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…