Featured

ಉಡುಪಿ : ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಯಶ್ಪಾಲ್ ಸುವರ್ಣ ಶ್ಲಾಘನೆ – vishwanews24

ಉಡುಪಿ : ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಯಶ್ಪಾಲ್ ಸುವರ್ಣ ಶ್ಲಾಘನೆ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದನಗಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೆಜಮಾಡಿ ಟೋಲ್ ಗೇಟ್ ಬಳಿ ಕಾರ್ಯಚರಣೆ ಮಾಡಿ ದಿಟ್ಟತನದಿಂದ ಓರ್ವ ಆರೋಪಿಯನ್ನು ಬಂಧಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಸವರಾಜ್ ಕನಹಟ್ಟಿ, ಪವನ್ ನಾಯಕ್ ಹಾಗೂ ಪೊಲೀಸ್ ಸಿಬ್ಬಂದಿ ಸಂದೀಪ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶ್ಲಾಘಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಗೋ ಕಳ್ಳತನ ಆರೋಪಿಗಳು ಕರ್ತವ್ಯನಿರತ ಪೋಲಿಸರ ಮೇಲೆ ಕಾರನ್ನು ಹತ್ತಿಸಿ ಹತ್ಯೆಗೆ ಯತ್ನ ಮಾಡಿರುವುದು ಅತ್ಯಂತ ಖಂಡನೀಯ. ತಕ್ಷಣ ಪೊಲೀಸ್ ಇಲಾಖೆ ಪರಾರಿಯಾದ ಆರೋಪಿಗಳನ್ನು ತಕ್ಷಣ ಬಂಧಿಸಿ, ಈ ಆರೋಪಿಗಳ ಜಾಲವನ್ನು ಪತ್ತೆಹಚ್ಚಿ ಪರೋಕ್ಷ ಸಹಕಾರ ನೀಡುತ್ತಿರುವ ವ್ಯಕ್ತಿಗಳನ್ನು ಕೂಡ ಬಂಧಿಸಿ ಗೋಕಳ್ಳರ ಅಟ್ಟಹಾಸಕ್ಕೆ ಕಡಿವಾಣ ಹಾಕಬೇಕಿದೆ.

ಗೋಕಳ್ಳರ ಈ ಕೃತ್ಯದಿಂದ ಜನಸಾಮಾನ್ಯರು ಆತಂಕಗೊಂಡಿದ್ದು, ಕರ್ತವ್ಯ ನಿರತ ಪೋಲಿಸರ ಮೇಲೆಯೇ ಕಾರು ಚಲಾಯಿಸಿ ಹತ್ಯೆಗೆ ಯತ್ನಿಸುವ ಮೂಲಕ ಪೊಲೀಸ್ ಅಧಿಕಾರಿಗಳನ್ನು ಹೆದರಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ರವರು ಅಧಿಕಾರ ಸ್ವೀಕರಿಸಿದ ಬಳಿಕ ಗೋ ಕಳ್ಳತನ ಪ್ರಕರಣಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿರುವುದು ಶ್ಲಾಘನೀಯ. ಕರ್ತವ್ಯ ನಿರತ ಪೊಲೀಸರ ಹತ್ಯೆಗೆ ಯತ್ನಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳ ಹೆಡೆ ಮುರಿ ಕಟ್ಟುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಆಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago