Featured

ಉಡುಪಿ : ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಯಶ್ಪಾಲ್ ಸುವರ್ಣ ಶ್ಲಾಘನೆ – vishwanews24

ಉಡುಪಿ : ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಯಶ್ಪಾಲ್ ಸುವರ್ಣ ಶ್ಲಾಘನೆ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದನಗಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೆಜಮಾಡಿ ಟೋಲ್ ಗೇಟ್ ಬಳಿ ಕಾರ್ಯಚರಣೆ ಮಾಡಿ ದಿಟ್ಟತನದಿಂದ ಓರ್ವ ಆರೋಪಿಯನ್ನು ಬಂಧಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಸವರಾಜ್ ಕನಹಟ್ಟಿ, ಪವನ್ ನಾಯಕ್ ಹಾಗೂ ಪೊಲೀಸ್ ಸಿಬ್ಬಂದಿ ಸಂದೀಪ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶ್ಲಾಘಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಗೋ ಕಳ್ಳತನ ಆರೋಪಿಗಳು ಕರ್ತವ್ಯನಿರತ ಪೋಲಿಸರ ಮೇಲೆ ಕಾರನ್ನು ಹತ್ತಿಸಿ ಹತ್ಯೆಗೆ ಯತ್ನ ಮಾಡಿರುವುದು ಅತ್ಯಂತ ಖಂಡನೀಯ. ತಕ್ಷಣ ಪೊಲೀಸ್ ಇಲಾಖೆ ಪರಾರಿಯಾದ ಆರೋಪಿಗಳನ್ನು ತಕ್ಷಣ ಬಂಧಿಸಿ, ಈ ಆರೋಪಿಗಳ ಜಾಲವನ್ನು ಪತ್ತೆಹಚ್ಚಿ ಪರೋಕ್ಷ ಸಹಕಾರ ನೀಡುತ್ತಿರುವ ವ್ಯಕ್ತಿಗಳನ್ನು ಕೂಡ ಬಂಧಿಸಿ ಗೋಕಳ್ಳರ ಅಟ್ಟಹಾಸಕ್ಕೆ ಕಡಿವಾಣ ಹಾಕಬೇಕಿದೆ.

ಗೋಕಳ್ಳರ ಈ ಕೃತ್ಯದಿಂದ ಜನಸಾಮಾನ್ಯರು ಆತಂಕಗೊಂಡಿದ್ದು, ಕರ್ತವ್ಯ ನಿರತ ಪೋಲಿಸರ ಮೇಲೆಯೇ ಕಾರು ಚಲಾಯಿಸಿ ಹತ್ಯೆಗೆ ಯತ್ನಿಸುವ ಮೂಲಕ ಪೊಲೀಸ್ ಅಧಿಕಾರಿಗಳನ್ನು ಹೆದರಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ರವರು ಅಧಿಕಾರ ಸ್ವೀಕರಿಸಿದ ಬಳಿಕ ಗೋ ಕಳ್ಳತನ ಪ್ರಕರಣಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿರುವುದು ಶ್ಲಾಘನೀಯ. ಕರ್ತವ್ಯ ನಿರತ ಪೊಲೀಸರ ಹತ್ಯೆಗೆ ಯತ್ನಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳ ಹೆಡೆ ಮುರಿ ಕಟ್ಟುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಆಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago