Featured

ಉಡುಪಿ: ದಲಿತರು, ಮುಸ್ಲಿಮರ ಮಧ್ಯೆ ದ್ವೇಷ ಹರಡುವ ನಾಟಕ ಪ್ರದರ್ಶನ ರದ್ದುಪಡಿಸಲು ಒತ್ತಾಯಿಸಿ ಕಾಂಗ್ರೆಸ್ ಮನವಿ – vishwanews24

ಉಡುಪಿ: ದಲಿತರು, ಮುಸ್ಲಿಮರ ಮಧ್ಯೆ ದ್ವೇಷ ಹರಡುವ ನಾಟಕ ಪ್ರದರ್ಶನ ರದ್ದುಪಡಿಸಲು ಒತ್ತಾಯಿಸಿ ಕಾಂಗ್ರೆಸ್ ಮನವಿ

ಉಡುಪಿ: ನಗರದ ಕಡಿಯಾಳಿಯ ಶಾರದ ಕಲ್ಯಾಣಮಂಟಪ ಬಳಿಯ ಓವೈಸಿ ಸಭಾಂಗಣದಲ್ಲಿ ಡಿ.21ರ ರವಿವಾರ ನಡೆಯಲಿರುವ ರಂಗಭೂಮಿ ಟ್ರಸ್ಟ್ ಕೊಡಗು ಇವರು ಪ್ರಸ್ತುತ ಪಡಿಸುವ ‘ನಿಜ ಮಹಾತ್ಮ ಬಾಬಾ ಸಾಹೇಬ’ ಹೆಸರಿನ ನಾಟಕದ ಪ್ರದರ್ಶನವನ್ನು ರದ್ದುಪಡಿಸುವಂತೆ ಕೋರಿ ಪಕ್ಷದ ಎಸ್‌ಸಿ ಘಟಕದ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್‌ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಅರ್ಪಿಸಿ ಒತ್ತಾಯಿಸಿದೆ.

ಅವಿತಿಟ್ಟ ಸತ್ಯಗಳ ಸ್ಪೋಟಕ ನಾಟಕ ಪ್ರದರ್ಶನ ಎಂಬ ಉಪನಾಮೆಯೊಂದಿಗೆ ನಾಟಕ ಪ್ರದರ್ಶಿಸುವ ಬಗ್ಗೆ ಬಹಿರಂಗ ಜಾಹೀರಾತುಗಳನ್ನು ಈಗಾಗಲೇ ನೀಡಲಾಗಿದೆ. ಉಡುಪಿ ಜಿಲ್ಲೆ ಕೋಮು ಸೂಕ್ಷ್ಮ ಪ್ರದೇಶವಾಗಿರು ವುದರಿಂದ ಈ ನಾಟಕದ ಪೋಸ್ಟರ್‌ಗಳಲ್ಲಿ ತಿಳಿಸಿರುವಂತೆ ನಾಟಕವು ಪಾಕಿಸ್ತಾನ ವಿಭಜನೆ, ಮುಸ್ಲಿಂರ ಬಗೆಗಿನ ಬಾಬಾ ಸಾಹೇಬರ ಅಭಿಪ್ರಾಯ, ಕಾಂಗ್ರೆಸ್ ಪಕ್ಷದ ದ್ರೋಹ ಎಂಬ ಒಕ್ಕಣೆಗಳು ಈ ನಾಟಕದ ಆಯೋಜಕರ ಪೂರ್ವಗ್ರಹ ಪೀಡಿತ ಅಸಹನೆ ಹಾಗೂ ದ್ವೇಷಪೂರಿತ ಉದ್ದೇಶಗಳನ್ನು ಒತ್ತಿ ಹೇಳುತ್ತಿವೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.ಎಲ್ಲಾ ಪ್ರಚಾರಗಳನ್ನು ಗಮನಿಸಿದಾಗ, ಆಯೋಜಕರ ಉದ್ದೇಶ, ಸಮುದಾಯಗಳ ಮಧ್ಯದ ಸಾಮರಸ್ಯವನ್ನು ಹತ್ತಿಕ್ಕಿ ಜಿಲ್ಲೆಯಲ್ಲಿ ಕೋಮು ದ್ವೇಷವನ್ನು ಪಸರಿಸುವುದೇ ಆಗಿದೆ. ಹಾಗೂ ಮಹಾಮಾನವತಾವಾದಿಗಳಾದ ಬಾಬಾ ಸಾಹೇಬ ಅಂಬೇಡ್ಕ‌ರ್ ಅವರನ್ನು ತಪ್ಪಾಗಿ ಪ್ರಸ್ತುತ ಪಡಿಸಿ ಅವರ ಹೆಸರಿನಲ್ಲಿ ಮುಸ್ಲಿಂ- ದಲಿತ ದ್ವೇಷವನ್ನು ಹೆಚ್ಚಿಸುವುದೇ ಆಗಿದೆ.

ಆದ್ದರಿಂದ ಈ ನಾಟಕದ ಪ್ರದರ್ಶನದ ಅನುಮತಿಯನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಯ ವರಲ್ಲಿ ವಿನಂತಿಸಲಾಗಿದೆ.ಮನವಿ ಸಲ್ಲಿಸಿದ ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು, ಎಸ್‌ಸಿ ಘಟಕದ ಜಿಲ್ಲಾ ಅಧ್ಯಕ್ಷ ಜಯಕುಮಾರ್, ಕೇಶವ ಸಾಲ್ಯಾನ್, ಲಕ್ಷ್ಮೀಶ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ಸುಮನ ಬೋಳಾರ್, ಸಂಧ್ಯಾ ತಿಲಕ್, ಸುಕನ್ಯಾ ಪೂಜಾರಿ ಉಪಸ್ಥಿತರಿದ್ದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

12 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

12 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

13 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

15 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

15 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

15 hours ago