Featured

ಉಡುಪಿ:  ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು – vishwanews24

ಉಡುಪಿ:  ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು

ಉಡುಪಿ: ಕರ್ನಾಟಕದ ಕರಾವಳಿಗರನ್ನು ಮಹಾರಾಷ್ಟ್ರದ ಜತೆ ಭಾವನಾತ್ಮಕವಾಗಿ ಬೆಸೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು (ಮಂಗಳೂರು ಸೆಂಟ್ರಲ್‌ನಿಂದ ಮಹಾರಾಷ್ಟ್ರದ ಲೋಕಮಾನ್ಯ ತಿಲಕ್‌ ಟರ್ಮಿನಲ್‌) 1990ರ ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದಿದೆ.

ಜರ್ಮನ್‌ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್‌ಗಳನ್ನು ಹೊಂದಿದ ಮತ್ಸ್ಯಗಂಧ ರೈಲು ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹವಾನಿಯಂತ್ರಿತ ಬೋಗಿಯನ್ನೇರಿ ಕುಂದಾಪುರಕ್ಕೆ ಪ್ರಯಾಣ ಕೈಗೊಂಡರು. ಪ್ರಯಾಣದ ನಡುವೆ ರೈಲ್ವೆ ಪ್ರಯಾಣಿಕರ ಹೊಸ ಅನುಭವ, ಅನಿಸಿಕೆ ಆಲಿಸಿದರು.

ಉಡುಪಿ ಶಾಸಕ ಯಶಪಾಲ್‌ ಎ ಸುವರ್ಣ, ಕೊಂಕಣ ರೈಲ್ವೆಯ ಕಾರ್ಯತಂತ್ರ ಯೋಜನೆ ಮತ್ತು ವ್ಯವಹಾರ ಅಭಿವೃದ್ಧಿ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಜೋಸೆಫ್‌ ಇ ಜಾರ್ಜ್‌, ಮಂಗಳೂರಿನ ಹಿರಿಯ ತಾಂತ್ರಿಕ ವ್ಯವಸ್ಥಾಪಕ ದಿಲೀಪ್‌ ಡಿ. ಭರ್‌, ಕೊಂಕಣ ರೈಲ್ವೆ ಮಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಕೊಂಕಣ ರೈಲ್ವೆ ಕಾರವಾರ ವಿಭಾಗದ ಡೆಪ್ಯುಟಿ ಚೀಫ್‌ ಎಂಜಿನಿಯರ್‌ ವಿಜಯ ಕುಮಾರ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

1998ರ ಮೇ 1ರಂದು ಈ ರೈಲು ತನ್ನ ಸಂಚಾರವನ್ನು ಆರಂಭಿಸಿತ್ತು. ಅಂದಿನಿಂದ ಇಂದಿನವರೆಗೂ ಸುದೀರ್ಘ ಕಾಲ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿ ಜನರನ್ನು ಭಾವನಾತ್ಮಕವಾಗಿ ಬೆಸೆದಿತ್ತು. ಇದೀಗ ಈ ರೈಲು ಹೊಸ ತಂತ್ರಜ್ಞಾನದ ಮೂಲಕ ಆಧುನಿಕ ಸ್ಪರ್ಶ ಪಡೆದುಕೊಂಡಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago