Featured

ಉಡುಪಿ:  ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು – vishwanews24

ಉಡುಪಿ:  ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು

ಉಡುಪಿ: ಕರ್ನಾಟಕದ ಕರಾವಳಿಗರನ್ನು ಮಹಾರಾಷ್ಟ್ರದ ಜತೆ ಭಾವನಾತ್ಮಕವಾಗಿ ಬೆಸೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು (ಮಂಗಳೂರು ಸೆಂಟ್ರಲ್‌ನಿಂದ ಮಹಾರಾಷ್ಟ್ರದ ಲೋಕಮಾನ್ಯ ತಿಲಕ್‌ ಟರ್ಮಿನಲ್‌) 1990ರ ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದಿದೆ.

ಜರ್ಮನ್‌ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್‌ಗಳನ್ನು ಹೊಂದಿದ ಮತ್ಸ್ಯಗಂಧ ರೈಲು ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹವಾನಿಯಂತ್ರಿತ ಬೋಗಿಯನ್ನೇರಿ ಕುಂದಾಪುರಕ್ಕೆ ಪ್ರಯಾಣ ಕೈಗೊಂಡರು. ಪ್ರಯಾಣದ ನಡುವೆ ರೈಲ್ವೆ ಪ್ರಯಾಣಿಕರ ಹೊಸ ಅನುಭವ, ಅನಿಸಿಕೆ ಆಲಿಸಿದರು.

ಉಡುಪಿ ಶಾಸಕ ಯಶಪಾಲ್‌ ಎ ಸುವರ್ಣ, ಕೊಂಕಣ ರೈಲ್ವೆಯ ಕಾರ್ಯತಂತ್ರ ಯೋಜನೆ ಮತ್ತು ವ್ಯವಹಾರ ಅಭಿವೃದ್ಧಿ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಜೋಸೆಫ್‌ ಇ ಜಾರ್ಜ್‌, ಮಂಗಳೂರಿನ ಹಿರಿಯ ತಾಂತ್ರಿಕ ವ್ಯವಸ್ಥಾಪಕ ದಿಲೀಪ್‌ ಡಿ. ಭರ್‌, ಕೊಂಕಣ ರೈಲ್ವೆ ಮಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಕೊಂಕಣ ರೈಲ್ವೆ ಕಾರವಾರ ವಿಭಾಗದ ಡೆಪ್ಯುಟಿ ಚೀಫ್‌ ಎಂಜಿನಿಯರ್‌ ವಿಜಯ ಕುಮಾರ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

1998ರ ಮೇ 1ರಂದು ಈ ರೈಲು ತನ್ನ ಸಂಚಾರವನ್ನು ಆರಂಭಿಸಿತ್ತು. ಅಂದಿನಿಂದ ಇಂದಿನವರೆಗೂ ಸುದೀರ್ಘ ಕಾಲ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿ ಜನರನ್ನು ಭಾವನಾತ್ಮಕವಾಗಿ ಬೆಸೆದಿತ್ತು. ಇದೀಗ ಈ ರೈಲು ಹೊಸ ತಂತ್ರಜ್ಞಾನದ ಮೂಲಕ ಆಧುನಿಕ ಸ್ಪರ್ಶ ಪಡೆದುಕೊಂಡಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

8 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

11 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

14 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

15 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

15 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

15 hours ago