Featured

ಉಡುಪಿ:  ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು – vishwanews24

ಉಡುಪಿ:  ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು

ಉಡುಪಿ: ಕರ್ನಾಟಕದ ಕರಾವಳಿಗರನ್ನು ಮಹಾರಾಷ್ಟ್ರದ ಜತೆ ಭಾವನಾತ್ಮಕವಾಗಿ ಬೆಸೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲು (ಮಂಗಳೂರು ಸೆಂಟ್ರಲ್‌ನಿಂದ ಮಹಾರಾಷ್ಟ್ರದ ಲೋಕಮಾನ್ಯ ತಿಲಕ್‌ ಟರ್ಮಿನಲ್‌) 1990ರ ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದಿದೆ.

ಜರ್ಮನ್‌ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್‌ಗಳನ್ನು ಹೊಂದಿದ ಮತ್ಸ್ಯಗಂಧ ರೈಲು ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹವಾನಿಯಂತ್ರಿತ ಬೋಗಿಯನ್ನೇರಿ ಕುಂದಾಪುರಕ್ಕೆ ಪ್ರಯಾಣ ಕೈಗೊಂಡರು. ಪ್ರಯಾಣದ ನಡುವೆ ರೈಲ್ವೆ ಪ್ರಯಾಣಿಕರ ಹೊಸ ಅನುಭವ, ಅನಿಸಿಕೆ ಆಲಿಸಿದರು.

ಉಡುಪಿ ಶಾಸಕ ಯಶಪಾಲ್‌ ಎ ಸುವರ್ಣ, ಕೊಂಕಣ ರೈಲ್ವೆಯ ಕಾರ್ಯತಂತ್ರ ಯೋಜನೆ ಮತ್ತು ವ್ಯವಹಾರ ಅಭಿವೃದ್ಧಿ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಜೋಸೆಫ್‌ ಇ ಜಾರ್ಜ್‌, ಮಂಗಳೂರಿನ ಹಿರಿಯ ತಾಂತ್ರಿಕ ವ್ಯವಸ್ಥಾಪಕ ದಿಲೀಪ್‌ ಡಿ. ಭರ್‌, ಕೊಂಕಣ ರೈಲ್ವೆ ಮಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಕೊಂಕಣ ರೈಲ್ವೆ ಕಾರವಾರ ವಿಭಾಗದ ಡೆಪ್ಯುಟಿ ಚೀಫ್‌ ಎಂಜಿನಿಯರ್‌ ವಿಜಯ ಕುಮಾರ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

1998ರ ಮೇ 1ರಂದು ಈ ರೈಲು ತನ್ನ ಸಂಚಾರವನ್ನು ಆರಂಭಿಸಿತ್ತು. ಅಂದಿನಿಂದ ಇಂದಿನವರೆಗೂ ಸುದೀರ್ಘ ಕಾಲ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿ ಜನರನ್ನು ಭಾವನಾತ್ಮಕವಾಗಿ ಬೆಸೆದಿತ್ತು. ಇದೀಗ ಈ ರೈಲು ಹೊಸ ತಂತ್ರಜ್ಞಾನದ ಮೂಲಕ ಆಧುನಿಕ ಸ್ಪರ್ಶ ಪಡೆದುಕೊಂಡಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

9 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

10 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

10 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

10 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

11 hours ago