Featured

ಉಡುಪಿ :  ದಿನಕ್ಕೊಂದು ಕನ್ನಡ ಪತ್ರಿಕೆ ತಿಂಗಳಿಗೊoದು ಕನ್ನಡ ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ : ಸಚಿವ ಸುನಿಲ್ ಕುಮಾರ್ -Vishwanews24

ಉಡುಪಿ :  ದಿನಕ್ಕೊಂದು ಕನ್ನಡ ಪತ್ರಿಕೆ ತಿಂಗಳಿಗೊoದು ಕನ್ನಡ ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ : ಸಚಿವ ಸುನಿಲ್ ಕುಮಾರ್ -Vishwanews24

ಉಡುಪಿ : ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊoದು ಕನ್ನಡ ಪುಸ್ತಕ ಕೊಂಡು ಓದುವ ಹಾಗೆಯೇ ಎರಡು ತಿಂಗಳಿಗೊAದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರು ಸಹ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು.

ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡಬೇಕಿದೆ, ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು.

ಎರಡು ಇಲಾಖೆಗಳ ಆಡಳಿತ ಸುಧಾರಣೆಗೆ ಮತ್ತು ಕಾರ್ಯಕ್ರಮಗಳ ಸಮರ್ಥ ಅನುಷ್ಠಾನಕ್ಕೆ ಬೇಕಾಗುವ ಎಲ್ಲಾ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ 2019-20 ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆಕ್ಯಾತರ, ಹುಟ್ಟು ಬಿ ವಿ ಕಾರಂತ ಪ್ರಶಸ್ತಿಗೆ ಆಯ್ಕೆ, ಹೆಚ್.ವಿ.ವೆಂಕಟಸುಬ್ಬಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಗೆ ಭೇಟಿ ಕೊಟ್ಟು ಕನಕಾವಲೋಕನ ಪುಸ್ತಕ ಹಾಗೂ ಡಿ.ವಿ.ಜಿ ಅವರ ನೆನಪಿನ ಚಿತ್ರಗಳು ಮತ್ತು ಶಿವರಾಮ ಕಾರಂತರ ನಾಟಕಗಳು ಎಂಬ ಮೂರು ಪುಸ್ತಕಗಳನ್ನು ದುಡ್ಡುಕೊಟ್ಟು ಖರೀದಿ ಮಾಡಿದರು. ಅದರ ಮುಂಭಾಗದಲ್ಲಿಯೇ ಇದ್ದ ಕ್ಯಾಂಟೀನ್‌ನಲ್ಲಿ ಸಾಹಿತಿ ಮತ್ತು ಕಲಾವಿದರ ಜೊತೆ ಕಾಫಿ ಸೇವನೆ ಮಾಡಿದರು.

ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಡಿಯಿಟ್ಟ ಸಚಿವ ಸುನಿಲ್ ಕುಮಾರ್ ಇಡೀ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಸಾಂಸ್ಕೃತಿಕ ವಾತಾವರಣಕ್ಕೆ ಮೆರುಗು ಕೊಟ್ಟರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ, ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾಕ್ಟರ್ ಎಂ.ಎನ್.ನAದೀಶ್ ಹಂಚೆ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಸಂತಕುಮಾರ್ ಬಿ.ವಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಆನೂರು ಅನಂತ ಕೃಷ್ಣಶರ್ಮ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹಿಂದ್ರ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಕಲಾವಿದೆ ಮಾಳವಿಕಾ ಅವಿನಾಶ್, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಕನಕ ಅಧ್ಯಯನ ಪೀಠದ ಸುಮ್ಮನೆ ಸಮನ್ವಯಾಧಿಕಾರಿ ಎಂ.ಆರ್. ಸತ್ಯನಾರಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜಿ. ರವಿಶಂಕರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್. ರಂಗಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

7 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

8 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

9 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

9 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

9 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

9 hours ago