ಉಡುಪಿ: ಬಂಡವಾಳಶಾಹಿಗಳು, ಶ್ರೀಮಂತರ ಪ್ರಗತಿ ಬಯಸುತ್ತಿರುವ ಕೇಂದ್ರ ಸರಕಾರ ರೈತರು, ಕಾರ್ಮಿಕರ ಸಹಿತ ಬಡ ವರ್ಗದ ಜನರ ಏಳಿಗೆ, ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ.
ಕೋಟ್ಪಾ ಕಾಯಿದೆ ತಿದ್ದುಪಡಿಯಿಂದ ಬೀಡಿ ಉದ್ಯಮವನ್ನು ಹೊರಗಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬೀಡಿ ಉದ್ಯಮ ಕೆಲಸಗಾರರ ಒಕ್ಕೂಟ, ಕರ್ನಾಟಕ ರಾಜ್ಯ ಬೀಡಿ ಗುತ್ತಿಗೆದಾರರ ಸಂಘ, ಕರ್ನಾಟಕ ರಾಜ್ಯ ಋುಣಮುಕ್ತ ಹೋರಾಟ ಉಡುಪಿ ಜಿಲ್ಲಾಸಮಿತಿ, ಕಾರ್ಕಳ ಪ್ರದೇಶ ಬೀಡಿ ಕೆಲಸಗಾರರ ಸಂಘದ ವತಿಯಿಂದ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಉಡುಪಿಯ MGM ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಪುಸ್ತಕೋತ್ಸವ -Vishwanews24
ದಿನಬಳಕೆ ವಸ್ತುಗಳ ದರ ಗಗನಕ್ಕೇರಿದ್ದು, ಆರ್ಥಿಕ ವ್ಯವಸ್ಥೆಯೇ ನಾಶವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ ಬಿಜೆಪಿ ಆಡಳಿತದ ಆರು ವರ್ಷಗಳಲ್ಲಿ ಕೇವಲ 1 ಲಕ್ಷ ಉದ್ಯೋಗ ನೀಡಲಾಗಿದೆ. ಕೊರೊನಾ ಬಳಿಕ ಇದ್ದ ಉದ್ಯೋಗವೂ ಕಳೆದುಹೋಗಿದೆ. ಬೀಡಿ ಕಾರ್ಮಿಕರ ಸಮಸ್ಯೆಯನ್ನು ವಿಧಾನಸಭೆ, ಸಂಸತ್ನಲ್ಲೂ ಪ್ರಸ್ತಾಪಿಸಲಾಗುವುದು ಎಂದರು.
ಎಐಟಿಯುಸಿ ಉಪಾಧ್ಯಕ್ಷ ಬಿ. ಶೇಖರ್, ದಕ ಜಿಲ್ಲಾಬೀಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಪೂಜಾರಿ, ಕರ್ನಾಟಕ ರಾಜ್ಯ ಋುಣಮುಕ್ತ ಹೋರಾಟ ಉಡುಪಿ ಜಿಲ್ಲಾಸಮಿತಿ ಅಧ್ಯಕ್ಷ ಮಂಜುನಾಥ ಬೈಲೂರು, ಕಾರ್ಕಳ ಪ್ರದೇಶ ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷ ಹಮೀದ್, ಕೃಷ್ಣಪ್ಪ ತೊಕ್ಕೊಟ್ಟು ಉಪಸ್ಥಿತರಿದ್ದರು.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…