ಉಡುಪಿ: ಬಂಡವಾಳಶಾಹಿಗಳು, ಶ್ರೀಮಂತರ ಪ್ರಗತಿ ಬಯಸುತ್ತಿರುವ ಕೇಂದ್ರ ಸರಕಾರ ರೈತರು, ಕಾರ್ಮಿಕರ ಸಹಿತ ಬಡ ವರ್ಗದ ಜನರ ಏಳಿಗೆ, ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ.
ಕೋಟ್ಪಾ ಕಾಯಿದೆ ತಿದ್ದುಪಡಿಯಿಂದ ಬೀಡಿ ಉದ್ಯಮವನ್ನು ಹೊರಗಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬೀಡಿ ಉದ್ಯಮ ಕೆಲಸಗಾರರ ಒಕ್ಕೂಟ, ಕರ್ನಾಟಕ ರಾಜ್ಯ ಬೀಡಿ ಗುತ್ತಿಗೆದಾರರ ಸಂಘ, ಕರ್ನಾಟಕ ರಾಜ್ಯ ಋುಣಮುಕ್ತ ಹೋರಾಟ ಉಡುಪಿ ಜಿಲ್ಲಾಸಮಿತಿ, ಕಾರ್ಕಳ ಪ್ರದೇಶ ಬೀಡಿ ಕೆಲಸಗಾರರ ಸಂಘದ ವತಿಯಿಂದ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಉಡುಪಿಯ MGM ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಪುಸ್ತಕೋತ್ಸವ -Vishwanews24
ದಿನಬಳಕೆ ವಸ್ತುಗಳ ದರ ಗಗನಕ್ಕೇರಿದ್ದು, ಆರ್ಥಿಕ ವ್ಯವಸ್ಥೆಯೇ ನಾಶವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ ಬಿಜೆಪಿ ಆಡಳಿತದ ಆರು ವರ್ಷಗಳಲ್ಲಿ ಕೇವಲ 1 ಲಕ್ಷ ಉದ್ಯೋಗ ನೀಡಲಾಗಿದೆ. ಕೊರೊನಾ ಬಳಿಕ ಇದ್ದ ಉದ್ಯೋಗವೂ ಕಳೆದುಹೋಗಿದೆ. ಬೀಡಿ ಕಾರ್ಮಿಕರ ಸಮಸ್ಯೆಯನ್ನು ವಿಧಾನಸಭೆ, ಸಂಸತ್ನಲ್ಲೂ ಪ್ರಸ್ತಾಪಿಸಲಾಗುವುದು ಎಂದರು.
ಎಐಟಿಯುಸಿ ಉಪಾಧ್ಯಕ್ಷ ಬಿ. ಶೇಖರ್, ದಕ ಜಿಲ್ಲಾಬೀಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಪೂಜಾರಿ, ಕರ್ನಾಟಕ ರಾಜ್ಯ ಋುಣಮುಕ್ತ ಹೋರಾಟ ಉಡುಪಿ ಜಿಲ್ಲಾಸಮಿತಿ ಅಧ್ಯಕ್ಷ ಮಂಜುನಾಥ ಬೈಲೂರು, ಕಾರ್ಕಳ ಪ್ರದೇಶ ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷ ಹಮೀದ್, ಕೃಷ್ಣಪ್ಪ ತೊಕ್ಕೊಟ್ಟು ಉಪಸ್ಥಿತರಿದ್ದರು.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…