ಉಡುಪಿ : ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ.
ಕಿರಿದಾದ ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು, ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ಇರುವುದಿಲ್ಲ.
ಸ್ಥಳೀಯ ಹಾಗೂ ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಣೆ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮೂಲಕ ನಿಷೇದಿತ ಪಟಾಕಿಗಳು ಹಾಗೂ ಸಂಬAಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಾಗಾಣೆ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.
ಪಟಾಕಿಗಳನ್ನು ಸರ್ಕಾರದ ಅಧಿಕಾರಿಗಳು ನಿಗಧಿಪಡಿಸಿದ ತೆರೆದ ಪ್ರದೇಶಗಳಲ್ಲಿ ಸ್ಥಳೀಯ ಆಡಳಿದ ವತಿಯಿಂದ ಅನುಮತಿ ನೀಡಲಾಗಿರುವ ತಾತ್ಕಾಲಿಕ ಮಳಿಗೆಗಳಲ್ಲಿ ಮಾತ್ರ ದಾಸ್ತಾನು ಮಾಡಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಸವೋಚ್ಛ ನ್ಯಾಯಾಲಯವು ರಾತ್ರಿ 8 ಗಂಟೆಯಿAದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಮಕ್ಕಳು ಪಟಾಕಿಯನ್ನು ಸಿಡಿಸುವ ಸಂದರ್ಭದಲ್ಲಿ ಪೋಷಕರು ಜೊತೆಗಿದ್ದು, ಯಾವುದೇ ಅನಾಹುತ ಉಂಟಾಗದAತೆ ಕಾಳಜಿ ವಹಿಸಬೇಕು. ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರುತ್ತದೆ.
ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ತೆರೆಯುವವರು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಕ್ರಮಗಳು:
ಮಳಿಗೆಗಳು ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಮಾಗ್ರಿಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದಷ್ಟೂ ಬೆಂಕಿಯನ್ನು ತಡೆಗಟ್ಟುವ (ಜಿiಡಿe ಡಿeಣಚಿಡಿಜಚಿಟಿಣ) ಸಾಮಾಗ್ರಿಗಳನ್ನು ನಿರ್ಮಾಣಕ್ಕೆ, ಉಪಯೋಗಿಸಬೇಕು.
ಪ್ರತಿಯೊಂದು ಮಳಿಗೆಯ ಮುಂಭಾಗದಿAದ ಹಾಗೂ ಹಿಂಭಾಗದಿAದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು.
ಪ್ರತಿಯೊಂದು ಮಳಿಗೆಗಳ ಗಾತ್ರ 10*10 ಚದರ ಅಡಿ ವಿಸ್ತೀರ್ಣಕ್ಕೆ ಸೀಮಿತಗೊಳಿಸಿರಬೇಕು ಮತ್ತು ಯಾವುದೇ ಹೆಚ್ಚಿನ ಮಿತಿಮೀರಿದ ದಾಸ್ತಾನಿನ ವ್ಯವಸ್ಥೆ ಇರಬಾರದು. ಮಳಿಗೆಯಲ್ಲಿ ಒಂದು 9 ಲೀಟರ್ ಸಾರ್ಮಥ್ಯದ ವಾಟರ್ ಫೈಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್ ನೀರನ್ನು ಇರಿಸಬೇಕು ಹಾಗೂ ಮಳಿಗೆಯ ಪಕ್ಕದಲ್ಲಿ ಎರಡು ಡ್ರಮ್ ನಲ್ಲಿ ಕನಿಷ್ಠ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು.
ಮಳಿಗೆಯಲ್ಲಿ ಅಡಿಗೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಬಾರದು ಎಂಬAತೆ ಸೂಚನಾ ಫಲಕವನ್ನು ಹಾಕಬೇಕು. ಪಟಾಕಿಯನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡಬೇಕು. ರಾತ್ರಿ ವೇಳೆ ಮಳಿಗೆಯಲ್ಲಿ ಯಾರು ಮಲಗಬಾರದು. ಪಟಾಕಿ ಮಳಿಗೆಗಳಲ್ಲಿ ಪಟಾಕಿಗಳನ್ನು ಪೂರ್ವಾಹ್ನ 6 ಗಂಟೆಯಿAದ ರಾತ್ರಿ 9 ಗಂಟೆಯ ವರೆಗೆ ಮಾರಾಟ ಮಾಡಬಹುದಾಗಿದೆ.
ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವಂತಹ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸಂಬAಧಪಟ್ಟ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…