Featured

ಉಡುಪಿ: ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ  :  ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ SDPI ಸಹಿತ ಹಲವು ಸಂಘಟನೆಗಳ ಒತ್ತಾಯ – Vishwanews24

ಉಡುಪಿ: ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ  :  ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ SDPI ಸಹಿತ ಹಲವು ಸಂಘಟನೆಗಳ ಒತ್ತಾಯ

ಉಡುಪಿ: ಹಿಂದೂ ಜಾಗರಣ ವೇದಿಕೆಯ ವತಿಯಿಂದ ರವಿವಾರ ನಡೆದ ದುರ್ಗಾ ದೌಡ್ ಮೆರವಣಿಗೆಯಲ್ಲಿ ಕಾರ್ಯಕರ್ತರು ತಲವಾರು ಪ್ರದರ್ಶಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳುವಂತೆ ವಿವಿಧ ಸಂಘಟನೆಗಳು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿವೆ. ಕಡಿಯಾಳಿಯಿಂದ ಆರಂಭಗೊಂಡ ಮೆರವಣಿಗೆಯು ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಕೆ.ಎಂ. ಮಾರ್ಗ, ಹಳೆಯ ಡಯಾನ ಸರ್ಕಲ್, ತೆಂಕಪೇಟೆ ಮಾರ್ಗವಾಗಿ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದಲ್ಲಿ ಸಮಾಪ್ತಿಗೊಂಡಿತ್ತು.

ಡೋಪಿಂಗ್ ಟೆಸ್ಟ್​ನಲ್ಲಿ ಸಿಕ್ಕಿಬಿದ್ದ ಭಾರತದ ಅಗ್ರಮಾನ್ಯ ಜಾವೆಲಿನ್​ಪಟು.. ಶಿವಪಾಲ್​ ಸಿಂಗ್​ಗೆ 4 ವರ್ಷ ಅಮಾನತು ಶಿಕ್ಷೆ – Vishwanews24

ಮೆರವಣಿಗೆಯ ಮುಂಭಾಗದಲ್ಲಿದ್ದ ಕೆಲವು ಕಾರ್ಯಕರ್ತರು ತಮ್ಮ ಕೈಯಲ್ಲಿ ತಲವಾರು ಹಿಡಿದುಕೊಂಡಿದ್ದರು. ದುರ್ಗಾ ದೌಡ್ ಮೆರವಣಿಗೆಯಲ್ಲಿ ಶಸ್ತ್ರಾಸ್ತ್ರ ಪ್ರದರ್ಶನ ಮಾಡಿರುವುದು ಖಂಡನೀಯ. ಇದು ಸಂವಿಧಾನ ವಿರೋಧಿಯಾಗಿದ್ದು, ಪೊಲೀಸ್ ಇಲಾಖೆ ಕೂಡಲೇ ಸಂಘಟಕರು ಹಾಗೂ ತಲವಾರು ಪ್ರದರ್ಶನ ಮಾಡಿರುವವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ದಸಂಸ ಬೇಡ್ಕರ್‌ ವಾದ, ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಉಡುಪಿ ಜಿಲ್ಲಾ ಘಟಕ ,ಎಸ್ ಡಿಪಿ ಐ ಸಹಿತ ಹಲವು ಸಂಘಟನೆಗಳು ಒತ್ತಾಯಿಸಿವೆ.

ಮೆರವಣಿಗೆಯಲ್ಲಿ ಸಚಿವ ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್ ಸಹಿತ ಬಿಜೆಪಿಯ ಬಹುತೇಕ ಮುಖಂಡರಿದ್ದರು.

Vishwa News 24

Recent Posts

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

11 minutes ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

28 minutes ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

2 days ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

2 days ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

2 days ago