ಉಡುಪಿ: ಹಿಂದೂ ಜಾಗರಣ ವೇದಿಕೆಯ ವತಿಯಿಂದ ರವಿವಾರ ನಡೆದ ದುರ್ಗಾ ದೌಡ್ ಮೆರವಣಿಗೆಯಲ್ಲಿ ಕಾರ್ಯಕರ್ತರು ತಲವಾರು ಪ್ರದರ್ಶಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಈ ಬಗ್ಗೆ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳುವಂತೆ ವಿವಿಧ ಸಂಘಟನೆಗಳು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿವೆ. ಕಡಿಯಾಳಿಯಿಂದ ಆರಂಭಗೊಂಡ ಮೆರವಣಿಗೆಯು ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಕೆ.ಎಂ. ಮಾರ್ಗ, ಹಳೆಯ ಡಯಾನ ಸರ್ಕಲ್, ತೆಂಕಪೇಟೆ ಮಾರ್ಗವಾಗಿ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದಲ್ಲಿ ಸಮಾಪ್ತಿಗೊಂಡಿತ್ತು.
ಮೆರವಣಿಗೆಯ ಮುಂಭಾಗದಲ್ಲಿದ್ದ ಕೆಲವು ಕಾರ್ಯಕರ್ತರು ತಮ್ಮ ಕೈಯಲ್ಲಿ ತಲವಾರು ಹಿಡಿದುಕೊಂಡಿದ್ದರು. ದುರ್ಗಾ ದೌಡ್ ಮೆರವಣಿಗೆಯಲ್ಲಿ ಶಸ್ತ್ರಾಸ್ತ್ರ ಪ್ರದರ್ಶನ ಮಾಡಿರುವುದು ಖಂಡನೀಯ. ಇದು ಸಂವಿಧಾನ ವಿರೋಧಿಯಾಗಿದ್ದು, ಪೊಲೀಸ್ ಇಲಾಖೆ ಕೂಡಲೇ ಸಂಘಟಕರು ಹಾಗೂ ತಲವಾರು ಪ್ರದರ್ಶನ ಮಾಡಿರುವವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ದಸಂಸ ಬೇಡ್ಕರ್ ವಾದ, ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಉಡುಪಿ ಜಿಲ್ಲಾ ಘಟಕ ,ಎಸ್ ಡಿಪಿ ಐ ಸಹಿತ ಹಲವು ಸಂಘಟನೆಗಳು ಒತ್ತಾಯಿಸಿವೆ.
ಮೆರವಣಿಗೆಯಲ್ಲಿ ಸಚಿವ ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್ ಸಹಿತ ಬಿಜೆಪಿಯ ಬಹುತೇಕ ಮುಖಂಡರಿದ್ದರು.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…